ಬ್ರೇಕಿಂಗ್ ನ್ಯೂಸ್
26-11-22 02:05 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಹುಡುಗರಿಗೆ ಸೂಕ್ತ ಹುಡುಗಿ ಸಿಗುತ್ತಿಲ್ಲ ಎನ್ನುವ ಕೊರಗಿನ ಮಧ್ಯೆ ಇಲ್ಲೊಬ್ಬ ಯುವಕ ತನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾನೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೀಗೆ ಪತ್ರ ಬರೆದಿದ್ದು, ಅದರ ಪ್ರತಿ ವೈರಲ್ ಆಗಿದೆ. ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಯಾಗಿರುವ ಪ್ರವೀಣ್ ಹೀಗೆ ಪತ್ರ ಬರೆದಿರುವಾತ. ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಣ್ಣಸಂಗಪ್ಪ ಅವರ ಪುತ್ರ ಪ್ರವೀಣ್ ಮದುವೆಗೆ ಹೆಣ್ಣು ಹುಡುಕಿ ಕೊಡುವಂತೆ ಎಸ್ಪಿಗೆ ಪತ್ರ ಬರೆದು ಸುದ್ದಿಯಾಗಿದ್ದಾನೆ.

ಈ ಹಿಂದೆ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಪ್ರವೀಣ್ ಒ.ಎಸ್., ಸದ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ನಡೆಸುತ್ತಿದ್ದಾನೆ. ಸಣ್ಣಸಂಗಪ್ಪ ಆಂಧ್ರ ಮೂಲದವರಾಗಿದ್ದು, ಸರಕಾರಿ ಸೇವೆಯಲ್ಲಿ ನಿವೃತ್ತರಾಗಿ ಶಿವಮೊಗ್ಗದಲ್ಲಿಯೇ ನೆಲೆಸಿದ್ದಾರೆ. ಆದರೆ ಕುಟುಂಬಸ್ಥರು ಆಂಧ್ರದಲ್ಲಿಯೇ ಇದ್ದು, ಹೆಚ್ಚು ಸಂಪರ್ಕದಲ್ಲಿ ಇಲ್ಲ ಎನ್ನಲಾಗುತ್ತಿದೆ. ಈ ನಡುವೆ, ಮಗ ಪ್ರವೀಣ್ ತನಗೊಂದು ಹೆಣ್ಣು ಹುಡುಕಿಕೊಡಿ ಎಂದು ಎಸ್ಪಿಗೆ ಪತ್ರ ಬರೆದಿದ್ದಾನೆ.
ಪ್ರವೀಣ್ ಪತ್ರವನ್ನು ನೋಡಿದ ಎಸ್ಪಿ ಮಿಥುನ್ ಕುಮಾರ್, ಈ ಬಗ್ಗೆ ಚೆಕ್ ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಜಕ್ಕೂ ಆತನಿಗೆ ಹೆಣ್ಣು ಸಿಗದೆ ಸಮಸ್ಯೆಗೀಡಾಗಿದ್ದಾನೆಯೇ ಅಥವಾ ಸುಮ್ಮನೆ ಪೊಲೀಸರಿಗೆ ಪತ್ರ ಬರೆದಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಸದ್ಯ ಪತ್ರ ಬರೆದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೃಷಿ ಕೆಲಸ ನಡೆಸುವ ಮಂದಿಯನ್ನು ಕಲಿತ ಹುಡುಗಿಯರು ಮದುವೆಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾಗಿದ್ದರೆ, ಕೆಲವರಿಗೆ ಸಂಬಂಧಿಕರನ್ನೆಲ್ಲ ಬಿಟ್ಟು ದೂರದಲ್ಲಿ ತನ್ನ ಪಾಡಿಗೆ ಕುಳಿತ ಕುಟುಂಬದ ವ್ಯಕ್ತಿಗಳಿಗೆ ಹೆಣ್ಣು ಸಿಗದೆ ಪರಿತಪಿಸುವಂತಾಗಿದೆ.
Man writes letter to SP of Shivamogga seeking help for good proposal for marriage.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm