ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.



ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.



ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm