ಬ್ರೇಕಿಂಗ್ ನ್ಯೂಸ್
27-11-22 04:47 pm HK News Desk ಕರ್ನಾಟಕ
ಮೈಸೂರು, ನ.27: ವಿವಾದಕ್ಕೊಳಗಾಗಿದ್ದ ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. ಮೈಸೂರು ಊಟಿ ರಸ್ತೆಯಲ್ಲಿ ನಿರ್ಮಾಣವಾಗಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ ವಿರುದ್ಧ ಸಂಸದ ಪ್ರತಾಪಸಿಂಹ ಆಕ್ರೋಶ ವ್ಯಕ್ತಪಡಿಸಿದ್ದರು.
ಬಸ್ ತಂಗುದಾಣ ಮೇಲಿದ್ದ ಎರಡು ಚಿಕ್ಕ ಗೋಪುರಗಳನ್ನು ಶನಿವಾರ ರಾತ್ರಿ ತೆರವು ಮಾಡಲಾಗಿದೆ. ಶಾಸಕ ರಾಮದಾಸ್ ಅಣತಿ ಮೇರೆಗೆ ಚಿಕ್ಕ ಗೋಪುರಗಳ ತೆರವುಗೊಳಿಸಲಾಗಿದೆ. ಮಧ್ಯೆ ಇದ್ದ ದೊಡ್ಡ ಗೋಪುರಗಳನ್ನು ಮಾತ್ರ ಉಳಿಸಿ ಚಿಕ್ಕ ಗೋಪುರವನ್ನು ಒಡೆದು ಹಾಕಲಾಗಿದೆ.

ಬಸ್ ತಂಗುದಾಣ ಗುಂಬಜ್ ಮಾದರಿ ಇದೆ ಎಂದು ಸಂಸದ ಪ್ರತಾಪಸಿಂಹ ಆಕ್ಷೇಪವೆತ್ತಿದ್ದರು. ಆದರೆ ಶಾಸಕ ರಾಮದಾಸ್ ಬಸ್ ತಂಗುದಾಣ ಅರಮನೆ ಮಾದರಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದರು. ಇದೇ ವಿಚಾರ ಸಂಸದ ಹಾಗೂ ಶಾಸಕರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಈಗ ಗೋಪುರ ತೆರವುಗೊಳಿಸಿ ವಿವಾದಕ್ಕೆ ಇತಿಶ್ರೀ ಹಾಕಲು ಯತ್ನಿಸಲಾಗಿದೆ.
ಈ ಬಗ್ಗೆ ಶಾಸಕ ರಾಮದಾಸ್ ಸ್ಪಷ್ಟನೆ ನೀಡಿದ್ದು ಗುಂಬಜ್ ಮಾದರಿಯಿದ್ದ ಬಸ್ ನಿಲ್ದಾಣದ ಗೋಪುರ ತೆರವಾಗಿದೆ. ವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವುಗೊಳಿಸಲಾಗಿದೆ. 12 ಬಸ್ ನಿಲ್ದಾಣದ ಶೆಲ್ಟರ್ ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು. ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು. ಅನವಶ್ಯಕವಾಗಿ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ. ಹಿರಿಯರ ಸಲಹೆಯಂತೆ ನಿರ್ಧಾರ ಮಾಡಿದ್ದೇನೆ. ದೊಡ್ಡ ಡೂಮ್ ಉಳಿಸಿಕೊಂಡು ಎರಡು ಚಿಕ್ಕ ಡೂಮ್ ಗಳನ್ನು ತೆರವು ಮಾಡಲಾಗಿದೆ. ಯಾರೂ ಅನ್ಯಥಾ ಭಾವಿಸಬಾರದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಶಾಸಕ ಎಸ್.ಎ. ರಾಮದಾಸ್ ಮನವಿ ಮಾಡಿದ್ದಾರೆ.
Two of the three controversial domes atop a bus stop in Mysuru, which had turned into a friction point between BJP leaders of the district, were removed late on Saturday. The domes atop the bus stop near JSS College, Ooty Road, which according to local MLA S A Ramdas was modelled along the lines of Mysuru Palace, had attracted the wrath of Mysuru-Kodagu MP Prathap Simha who had threatened to demolish them.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm