ಬ್ರೇಕಿಂಗ್ ನ್ಯೂಸ್
04-12-22 09:31 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.4 : ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಡಿಸೆಂಬರ್ 5ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಜೆಇ ಮೆದುಳು ಜ್ವರ 'ಪ್ಲೇವಿವೈರಸ್' ಎಂಬ ವೈರಾಣುವಿನಿಂದ ಬರುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿ ಈ ವೈರಾಣುವಿದ್ದು ಅದರಿಂದ ಮಾನವನಿಗೆ ಹರಡುತ್ತದೆ. ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.
ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ. 20ರಿಂದ ಶೇ. 30ರಷ್ಟಿದೆ. ಗುಣಮುಖರಾದ ಶೇ. 30ರಿಂದ 50ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಉಂಟಾಗಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು ಎಂದು ಸಚಿವರು ವಿವರಿಸಿದರು.
A special vaccination drive to inoculate an estimated 48 lakh children aged between 1-15 against Japanese Encephalitis (JE) will be held in Karnataka from December 5 for a period of three weeks, State Health Minister K Sudhakar said on Sunday. Encephalitis is the inflammation of the brain caused by either infection or an allergic reaction. "JE is one of the most common causes of Encephalitis in India and a total of 68,000 cases are reported every year. Among these, the death rate is around 20 to 30 per cent.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm