ಬ್ರೇಕಿಂಗ್ ನ್ಯೂಸ್
06-12-22 09:36 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗುವುದು. ಅಲ್ಲದೆ, ಒಲಂಪಿಕ್ಸ್ ಹಾಗೂ ಪ್ಯಾರಾ ಒಲಂಪಿಕ್ಸ್ ಪದಕ ವಿಜೇತ ಪದವೀಧರರಿಗೆ ಗ್ರೂಪ್ 'ಎ' ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಏಕಲವ್ಯ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ ಎಂದರು.
ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತು ಪಡೆದು, ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ₹10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನ ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.
ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿ ನಿಗದಿಪಡಿಸಲಾಗಿದೆ ಎಂದರು.
Karnataka Chief Minister Basavaraj Bommai Tuesday said the cabinet will grant its approval for the direct recruitment of sportspersons for government jobs in the state. The recruitment will be done through the selection committee headed by the additional chief secretary of the Department of Sports and offer Group ‘A’ jobs to Olympics and Paralympics winners who are also degree holders.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm