ಬ್ರೇಕಿಂಗ್ ನ್ಯೂಸ್
09-12-22 07:26 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರಧಾನಿ ಮೋದಿ ಪ್ರಭಾವ ಗುಜರಾತಿಗೆ ಸೀಮಿತವಾಗಿದೆ. ಈ ಬಾರಿಯ ಗುಜರಾತ್, ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ದೆಹಲಿ ಪಾಲಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶ ದೇಶದ ಜನತೆಗೆ ಮೂರು ಸಂದೇಶಗಳನ್ನು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ. ಮೂರನೆಯದು, ದೆಹಲಿ ಹಾಗೂ ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿ ಮೋದಿಯವರು ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವುದು. ಬಿಜೆಪಿ ಭದ್ರಕೋಟೆ ಎಂದು ಕರೆಯಲ್ಪಡುವ ಗುಜರಾತ್ನಲ್ಲೂ 12 ಶೇಕಡಾ ಮತಗಳನ್ನು ಆಮ್ ಆದ್ಮಿ ಪಡೆದಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಸಡ್ಡು ಹೊಡೆದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

![]()
2012ರಲ್ಲಿ ʻಭ್ರಷ್ಟಾಚಾರ ವಿರೋಧಿ ಭಾರತʼ ಹೋರಾಟದ ಭಾಗವಾಗಿ ಆಮ್ ಆದ್ಮಿ ಪಾರ್ಟಿ ಹುಟ್ಟಿಕೊಂಡಿತ್ತು. ಬೆರಳೆಣಿಕೆಯ ಹತ್ತು ಕಾರ್ಯಕರ್ತರಿಂದ ಆರಂಭಗೊಂಡಿದ್ದ ಪಕ್ಷವು ಕೇವಲ ಹತ್ತು ವರ್ಷಗಳಲ್ಲಿ ಹೆಮ್ಮರವಾಗಿ ದೇಶಾದ್ಯಂತ ಬೆಳೆದಿದೆ. ದೆಹಲಿ, ಪಂಜಾಬ್ ಬಳಿಕ ದೇಶದೆಲ್ಲೆಡೆ ವಿಸ್ತರಣೆಯಾಗಿದೆ. ಚುನಾವಣಾ ಆಯೋಗದ ಮಾನದಂಡಕ್ಕೆ ಅನುಗುಣವಾಗಿ ನಾಲ್ಕು ರಾಜ್ಯಗಳಲ್ಲಿ ಸಾಧನೆ ತೋರುವ ಮೂಲಕ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆಯಲು ಅರ್ಹತೆ ಪಡೆದಿದೆ. ಎಎಪಿಗೆ ದೇಶಾದ್ಯಂತ ಸಿಗುತ್ತಿರುವ ಯಶಸ್ಸಿಗೆ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮ ಹಾಗೂ ಪಕ್ಷದ ತತ್ವ ಸಿದ್ಧಾಂತಗಳು ಕಾರಣ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಎಎಪಿ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, ಕರ್ನಾಟಕದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಆಮ್ ಆದ್ಮಿ ಪಾರ್ಟಿ ಎದ್ದು ನಿಲ್ಲಲಿದೆ. ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಹೋದ ಸಂದರ್ಭದಲ್ಲಿ ಜನಸಾಮಾನ್ಯರ ನಾಡಿಮಿಡಿತ ತಿಳಿಯಲು ನಾನು ಪ್ರಯತ್ನಿಸಿದ್ದು, ಆಗ ಈ ಅಂಶ ಸ್ಪಷ್ಟವಾಗಿ ಗಮನಕ್ಕೆ ಬಂದಿದೆ. ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಹೇಳಿಕೆ ಮೂರ್ಖತನದಿಂದ ಕೂಡಿದೆ
ಆಮ್ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕಲು ಬಿಜೆಪಿ ಎಎಪಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಮೂರ್ಖತನದ್ದು. ಚುನಾವಣೆ ಎಂಬ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ ಸೋಲೊಪ್ಪಿಕೊಳ್ಳುವ ಕಾಂಗ್ರೆಸ್ಗೆ ಎಎಪಿ ಬಗ್ಗೆ ಮಾತಾಡುವ ನೈತಿಕತೆಯಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಅತ್ಯಂತ ಭ್ರಷ್ಟ ಪಕ್ಷಗಳಾಗಿದ್ದು, ಇವೆರಡರ ದುರಾಡಳಿತದಿಂದ ಬೇಸತ್ತಿರುವವರು ಹಾಗೂ ದೇಶದ ರಾಜಕೀಯದಲ್ಲಿ ಬದಲಾವಣೆ ತರಬೇಕೆಂದು ಬಯಸುತ್ತಿರುವವರು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲ ಭ್ರಷ್ಟ ಪಕ್ಷಗಳಿಂದ ಆಮ್ ಆದ್ಮಿ ಪಾರ್ಟಿ ಅಂತರ ಕಾಯ್ದುಕೊಂಡು ಮುನ್ನಡೆಯುತ್ತಿದೆ ಎಂದಿದ್ದಾರೆ.
ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ವಕೀಲರಾದ ಕೆ.ದಿವಾಕರ್ ಈ ವೇಳೆ ಉಪಸ್ಥಿತರಿದ್ದರು.
Aam Aadmi Partys Karnataka state president Prithvi Reddy Modi power prooved only in Gujrath.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm