ಬ್ರೇಕಿಂಗ್ ನ್ಯೂಸ್
12-12-22 01:30 pm HK News Desk ಕರ್ನಾಟಕ
ಹಾಸನ, ಡಿ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ಸ್ವಿಫ್ಟ್ ಹಾಗೂ ಇನೋವಾ ಕಾರು ಮಧ್ಯೆ ಭೀಕರ ಅಪಘಾತ ನಡೆದಿದ್ದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಮದುವೆಗೆ ತೆರಳಿ ಬರುತ್ತಿದ್ದ ದಂಪತಿ ಸೇರಿ ಮೂವರು ಸಾವು ಕಂಡಿದ್ದಾರೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ವೇಳೆಗೆ ಅಪಘಾತ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಇನೋವಾ ಕಾರಿನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಇನೋವಾ ಕಾರಿನಲ್ಲಿದ್ದ ಹಾಸನ ನಗರದ ದೊಡ್ಡಿ ರಸ್ತೆಯ ಶ್ರೀನಿವಾಸಮೂರ್ತಿ(66), ಜಯಂತಿ (60) ದಂಪತಿ ಹಾಗು ಸಂಬಂಧಿ ಕಾರು ಚಲಾಯಿಸುತ್ತಿದ್ದ ಪ್ರಭಾಕರ್ ಎಂಬವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಸಂಬಂಧ ಬಾಡಿಗೆ ಕಾರಿನಲ್ಲಿ ತೆರಳಿದ್ದ ಕುಟುಂಬ ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮದುವೆ ಮುಗಿಸಿ ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದ ಇನ್ನೋವಾ ಕಾರು, ಆನಂತರ ಎದುರಿನಿಂದ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.



ಭೀಕರ ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಕಿಶೋರ್ ಮತ್ತು ಇನ್ನೊಬ್ಬರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಎರಡೂ ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Five people have been killed and three seriously injured in a head-on collision between two cars on Bengaluru-Mangaluru national highway, near Nagathihalli, in Nagamangala taluk, on Sunday night. Three passengers in the Swift car, from Hassan and two passengers in the Innova car were killed on the spot in the mishap, according to police.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm