ಬ್ರೇಕಿಂಗ್ ನ್ಯೂಸ್
12-12-22 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12 : ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಖಚಿತ ಪಡಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 5 ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿದೆ. ಬಾಲಕಿ ಮೇಲೆ ನಿಗಾ ವಹಿಸಿದ್ದೇವೆ. ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಝೀಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಡಾ.ಕೆ.ಸುಧಾಕರ್, ಪುಣೆ ವೈರಾಲಜಿ ಲ್ಯಾಬ್ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ ಎಂದಿದ್ದಾರೆ.
ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದ ಬಾಲಕಿಗೆ ನ.13ರಂದು ಮೊದಲು ಜ್ವರ ಕಾಣಿಸಿಕೊಂಡಿತ್ತು. ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ವಿಜಯನಗರದ ವಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ಗೆ ಕಳಿಸಿದ್ದರು. ಡಿಸೆಂಬರ್ 9ರಂದು ಬಾಲಕಿಗೆ ಝೀಕಾ ಸೋಂಕು ಇರುವುದು ಪತ್ತೆಯಾಗಿದೆ. ಬಾಲಕಿ ಕುಟುಂಬಸ್ಥರ ರಕ್ತ ಹಾಗೂ ಯೂರಿನ್ ಸ್ಯಾಂಪಲ್ ಸಂಗ್ರಹಿಸಲಾಗಿದ್ದು ಐದು ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Karnataka Health Minister Dr K Sudhakar on Monday confirmed the first Zika virus case in Karnataka. The minister said that a 5-year-old girl from Raichur has tested positive for the virus. Sudhakar said that the girl is being closely being monitored by a team of doctors. Officials said that the girl was suffering from vomiting and a fever for the past 2 weeks. Initially, she was treated at Taluk hospital in Sindhanur, and was later shifted to Vijayanagara Institute of Medical Sciences.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm