ಬ್ರೇಕಿಂಗ್ ನ್ಯೂಸ್
15-12-22 09:08 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಕಲಬುರಗಿ ಜಿಲ್ಲೆಯ ಅಫಜಲಪುರದ ಕಾಂಗ್ರೆಸ್ ಮುಖಂಡ ಆರ್.ಡಿ. ಪಾಟೀಲ ಹಾಗೂ ಆತನ ಸಹೋದರ ಮಹಾಂತೇಶ ಪಾಟೀಲಗೆ ಎಂಟು ತಿಂಗಳ ಬಳಿಕ ಜಾಮೀನು ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ. ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ ಗುರುವಾರ ಆದೇಶ ನೀಡಿದೆ.

ಕಲಬುರಗಿ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ 2021ರ ಅಕ್ಟೋಬರ್ 3ರಂದು ನಡೆದಿದ್ದ ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣದಲ್ಲಿ ಆರ್.ಡಿ. ಪಾಟೀಲ ಮತ್ತು ಮಹಾಂತೇಶ ಪಾಟೀಲ ಪ್ರಮುಖ ಆರೋಪಿಗಳಾಗಿದ್ದರು. ಇವರು ತಮಗೆ ದೊಡ್ಡ ಮೊತ್ತದ ಹಣ ನೀಡಿದ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಸಿ ಪಾಸ್ ಆಗುವಂತೆ ನೋಡಿಕೊಂಡಿದ್ದರು. ಈ ಬಗ್ಗೆ ಕಳೆದ ಏಪ್ರಿಲ್ ತಿಂಗಳಲ್ಲಿ ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆಯಾಗುತ್ತಿದ್ದಂತೆ ಆರ್ ಡಿ. ಪಾಟೀಲ್ ಮತ್ತು ಮಹಾಂತೇಶ ಪಾಟೀಲ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು.
![]()
ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದ ತನಿಖಾ ತಂಡ ಏಪ್ರಿಲ್ 22ರಂದು ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದ್ದ ಮಹಾಂತೇಶ ಪಾಟೀಲನನ್ನು ಬಂಧಿಸಿತ್ತು. ಮರುದಿನವೇ ಮಹಾರಾಷ್ಟ್ರದಲ್ಲಿ ಆರ್.ಡಿ. ಪಾಟೀಲನನ್ನೂ ಬಂಧಿಸಲಾಗಿತ್ತು.
ಆನಂತರ ಜಾಮೀನಿಗಾಗಿ ಹಲವಾರು ಪ್ರಯತ್ನ ನಡೆದಿದ್ದರೂ ಜೆಎಂಎಫ್ಸಿ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಸುಮಾರು ಎಂಟು ತಿಂಗಳ ಬಳಿಕ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
Rudragowda Patil, main accused in the malpractice reported in the examination for recruitment of Police Sub-Inspectors (PSIs), who was arrested on April 24, was granted bail by the High Court of Karnataka in Kalaburagi on Thursday. However, Patil is not likely to be released from judicial custody, as he has been granted bail only in one case connected to the Chowk Police Station. Multiple cases have been registered against the accused in different police stations.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm