ಬ್ರೇಕಿಂಗ್ ನ್ಯೂಸ್
17-12-22 09:50 pm HK News Desk ಕರ್ನಾಟಕ
ರಾಮನಗರ, ಡಿ.17 : ನಮ್ಮ ಕುಟುಂಬಕ್ಕೆ ರಾಜಕೀಯ ಪುನರ್ಜನ್ಮ ನೀಡಿ ಬೆಳೆಸುತ್ತಿರುವ ಕ್ಷೇತ್ರದಲ್ಲಿ 2023ಕ್ಕೆ ನಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ. ನಿಮ್ಮೆಲ್ಲರ ಸಹಕಾರ ನಮಗೆ ನೀಡಿದಂತೆ, ಆತನಿಗೂ ಇರಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ ವೇಳೆ ಈ ಘೋಷಣೆ ಮಾಡಲಾಗಿದೆ. 2023ರ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಸ್ವತಃ ತಾಯಿ ಅನಿತಾ ಕುಮಾರಸ್ವಾಮಿ ಘೋಷಣೆ ಮಾಡುವ ತನ್ನ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿದ್ದಾರೆ. ಅನಿತಾ ಅವರ ಮಾತು ಕೇಳುತ್ತಿದ್ದಂತೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ನಮ್ಮ ಮಾವ, ನನ್ನ ಪತಿ ಹಾಗೂ ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು. ಕೆಲವರು ಅಪಪ್ರಚಾರ ಮಾಡುತ್ತಿದ್ದರು, ಅವೆಲ್ಲಕ್ಕೂ ತೆರೆ ಎಳೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಆತನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿಸಬೇಕೆಂದು ಕಾರ್ಯಕರ್ತರು, ಮುಖಂಡರು ಒತ್ತಡ ಹಾಕುತ್ತಿದ್ದರು. ನಾನು ತೀರ್ಮಾನ ಮಾಡುವ ಮೊದಲೇ ಅನಿತಾ ಕುಮಾರಸ್ವಾಮಿ ಘೋಷಿಸಿ ಬಿಟ್ಟಿದ್ದಾರೆ. ಅನಿರೀಕ್ಷಿತವಾಗಿ ಘೋಷಣೆಯಾಗಿದೆ. ಇಲ್ಲಿಯೂ ಕುತಂತ್ರ ರಾಜಕಾರಣ ನಡೆಯಬಹುದು. ಅದ್ಯಾವುದನ್ನೂ ಲೆಕ್ಕಿಸದೆ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನ ಮುಂದಿನ ರಾಜಕೀಯ ಬದುಕು ನಿಮಗೆ ಬಿಟ್ಟಿದ್ದೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.
JD(S) leader H D Kumaraswamy, who had earlier said that his son won’t contest the 2023 Karnataka assembly polls, on Saturday indicated the possibility of him fighting the election, stating that party workers will decide whether Anitha or Nikhil Kumaraswamy should be the candidate from here.Anitha, who is the wife of H D Kumaraswamy, currently represents Ramanagara assembly segment as MLA.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm