ಬ್ರೇಕಿಂಗ್ ನ್ಯೂಸ್
17-12-22 09:50 pm HK News Desk ಕರ್ನಾಟಕ
ರಾಮನಗರ, ಡಿ.17 : ನಮ್ಮ ಕುಟುಂಬಕ್ಕೆ ರಾಜಕೀಯ ಪುನರ್ಜನ್ಮ ನೀಡಿ ಬೆಳೆಸುತ್ತಿರುವ ಕ್ಷೇತ್ರದಲ್ಲಿ 2023ಕ್ಕೆ ನಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ. ನಿಮ್ಮೆಲ್ಲರ ಸಹಕಾರ ನಮಗೆ ನೀಡಿದಂತೆ, ಆತನಿಗೂ ಇರಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ ವೇಳೆ ಈ ಘೋಷಣೆ ಮಾಡಲಾಗಿದೆ. 2023ರ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಸ್ವತಃ ತಾಯಿ ಅನಿತಾ ಕುಮಾರಸ್ವಾಮಿ ಘೋಷಣೆ ಮಾಡುವ ತನ್ನ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿದ್ದಾರೆ. ಅನಿತಾ ಅವರ ಮಾತು ಕೇಳುತ್ತಿದ್ದಂತೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ನಮ್ಮ ಮಾವ, ನನ್ನ ಪತಿ ಹಾಗೂ ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು. ಕೆಲವರು ಅಪಪ್ರಚಾರ ಮಾಡುತ್ತಿದ್ದರು, ಅವೆಲ್ಲಕ್ಕೂ ತೆರೆ ಎಳೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಆತನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿಸಬೇಕೆಂದು ಕಾರ್ಯಕರ್ತರು, ಮುಖಂಡರು ಒತ್ತಡ ಹಾಕುತ್ತಿದ್ದರು. ನಾನು ತೀರ್ಮಾನ ಮಾಡುವ ಮೊದಲೇ ಅನಿತಾ ಕುಮಾರಸ್ವಾಮಿ ಘೋಷಿಸಿ ಬಿಟ್ಟಿದ್ದಾರೆ. ಅನಿರೀಕ್ಷಿತವಾಗಿ ಘೋಷಣೆಯಾಗಿದೆ. ಇಲ್ಲಿಯೂ ಕುತಂತ್ರ ರಾಜಕಾರಣ ನಡೆಯಬಹುದು. ಅದ್ಯಾವುದನ್ನೂ ಲೆಕ್ಕಿಸದೆ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನ ಮುಂದಿನ ರಾಜಕೀಯ ಬದುಕು ನಿಮಗೆ ಬಿಟ್ಟಿದ್ದೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.
JD(S) leader H D Kumaraswamy, who had earlier said that his son won’t contest the 2023 Karnataka assembly polls, on Saturday indicated the possibility of him fighting the election, stating that party workers will decide whether Anitha or Nikhil Kumaraswamy should be the candidate from here.Anitha, who is the wife of H D Kumaraswamy, currently represents Ramanagara assembly segment as MLA.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm