ಬ್ರೇಕಿಂಗ್ ನ್ಯೂಸ್
19-12-22 07:26 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.19 : ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸೋಮವಾರ ಕೊನೆಯುಸಿರೆಳೆದಿದ್ದಾನೆ.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಅಡ್ಡ ಬಂದಿದ್ದ ಶಿಕ್ಷಕಿ ಗೀತಾ ಬಾರಕೇರಿ ಎಂಬವರ ಮೇಲೂ ಹಲ್ಲೆ ನಡೆಸಿದ್ದ. ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಲೆಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮತ್ತು ಎಸ್ಪಿ ಶಿವಪ್ರಕಾಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ.
A guest teacher has been accused of fatally assaulting a fellow teacher and a student. The incident took place in the Government Model Primary School of Hadli village in Naragunda taluk of Gadag district. A guest teacher named Muthappa Hadagali attacked the onlookers with a shovel. Geeta Barakera, a guest teacher, assaulted Bharat, a class 4 student and another teacher.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm