ಬ್ರೇಕಿಂಗ್ ನ್ಯೂಸ್
23-12-22 02:37 pm HK News Desk ಕರ್ನಾಟಕ
ಬೆಂಗಳೂರು, ಡಿ.23: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದು ಮಹತ್ವದ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಕೋವಿಡ್ ಲಕ್ಷಣವುಳ್ಳ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2 ಅಂದರೆ ನಿರ್ದಿಷ್ಟ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
ಎಲ್ಲಾ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಡ್ಡಾಯವಾಗಿ ಕಳುಹಿಸಬೇಕು. ಕೋವಿಡ್ ಹೆಚ್ಚಳದ ಕಾರಣ ಎಲ್ಲಾ ಹಂತಗಳಲ್ಲೂ ಲಸಿಕಾಕರಣದ ಕ್ಯಾಂಪ್ ಆಯೋಜಿಸುವಂತೆ ತಿಳಿಸಿದೆ.
ಸಾರ್ವಜನಿಕರು ಹಾಗೂ ಸಭೆ, ಸಮಾರಂಭಗಳ ಆಯೋಜಕರಿಗೂ ಕೋವಿಡ್ ನಿಯಂತ್ರಣ ಸಲಹೆಯನ್ನು ಮಾಡಲಾಗಿದ್ದು ಮುಚ್ಚಿದ ಕೋಣೆಯ ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.
ಅರ್ಹರೆಲ್ಲರೂ ಕೋವಿಡ್ ಲಸಿಕೆಯ ಫ್ರಿಕಾಶನರಿ ಡೋಸ್ ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟ ಸಮಸ್ಯೆ ಇರೋರು, ಕೋವಿಡ್ ಸೋಂಕಿನ ಲಕ್ಷಣ ಹೊಂದಿರೋರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದಲ್ಲದೇ, ದೈಹಿಕ ಅಂತರವನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಹೇಳಿದೆ.
The Karnataka government on Thursday decided to conduct mandatory testing of Influenza Like Illness (ILI) and Severe Acute Respiratory Illness (SARI) in the state amid a spurt in COVID-19 cases in some parts of the world, including China.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm