ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm