ಬ್ರೇಕಿಂಗ್ ನ್ಯೂಸ್
01-01-23 10:53 am Bangalore Correspondent ಕರ್ನಾಟಕ
ಬೆಂಗಳೂರು, ಜ.1 : ತುಳು ಚಿತ್ರರಂಗದ ಪ್ರತಿಭಾನ್ವಿತ ನಟ ಗಿರ್ಗಿಟ್ ಖ್ಯಾತಿಯ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಫೈನಲ್ ಸ್ಪರ್ಧೆಯಲ್ಲಿ ನಟ ಸುದೀಪ್, ರೂಪೇಶ್ ಶೆಟ್ಟಿ ಗೆಲುವನ್ನು ಘೋಷಿಸಿದ್ದಾರೆ.
ಒಟಿಟಿ ವೇದಿಕೆಯ ಮೂಲಕ ಬಿಗ್ ಬಾಸ್ ಕಾಲಿಟ್ಟಿದ್ದ ರೂಪೇಶ್ ಶೆಟ್ಟಿ ಅದರಲ್ಲೂ ಟಾಪರ್ ಎನಿಸಿದ್ದರು. ಬಳಿಕ ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ನಲ್ಲಿಯೂ ಸ್ಪರ್ಧಿಯಾಗಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರಲ್ಲೂ ವಿನ್ನರ್ ಆಗಿದ್ದು ಮತ್ತಷ್ಟು ಖ್ಯಾತಿ ಗಳಿಸಿದ್ದಾರೆ.
ಫಿನಾಲೆಯಲ್ಲಿ ರಾಕೇಶ್ ಅಡಿಗ ಟಫ್ ಫೈಟ್ ಕೊಟ್ಟಿದ್ದರು. ಇಬ್ಬರಲ್ಲಿ ಒಬ್ಬರು ಬಿಗ್ ಬಾಸ್ ವಿನ್ನರ್ ಆಗುವುದು ಖಚಿತ ಎಂಬ ನೆಲೆಯಲ್ಲಿ ಪೈಪೋಟಿ ಮೂಡಿಸಿದ್ದರು. ಇಬ್ಬರು ಸ್ಪರ್ಧಿಗಳ ಬೆಂಬಲಿಗರು, ಸ್ನೇಹಿತರು ಇವರಿಗೆ ವೋಟ್ ಮಾಡುವಂತೆ ಭಾರೀ ಪ್ರಚಾರ ನಡೆಸಿದ್ದರು. ತುಳು ಚಿತ್ರದಲ್ಲಿ ಖ್ಯಾತಿ ಗಳಿಸಿದ್ದ ರೂಪೇಶ್ ಶೆಟ್ಟಿಗೆ ಕರಾವಳಿಯಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಹೀಗಾಗಿ ಕೊನೆ ಕ್ಷಣದ ವರೆಗೂ ಅಭಿಮಾನಿಗಳಿಗೆ ಕಾತುರಗಳಿದ್ದವು. ರೂಪೇಶ್ ಶೆಟ್ಟಿ ಗೆಲುವು ಘೋಷಣೆ ಆಗುತ್ತಿದ್ದಂತೆ ರಾಕೇಶ್ ಅಡಿಗ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ದಿವ್ಯಾ ಉರುಡುಗ, ರೂಪೇಶ್ ರಾಜಣ್ಣ, ದೀಪಿಕಾ ದಾಸ್, ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ ಇದ್ದರು. ಶುಕ್ರವಾರ (ಡಿಸೆಂಬರ್ 30) ದಿವ್ಯಾ ಎಲಿಮಿನೇಟ್ ಆದರೆ, ಶನಿವಾರ (ಡಿಸೆಂಬರ್ 31) ರೂಪೇಶ್ ರಾಜಣ್ಣ ಮೊದಲು ಔಟ್ ಆದರೆ, ದೀಪಿಕಾ ದಾಸ್ ಬಳಿಕ ಹೊರಹೋದರು. ಸುದೀಪ್ ಅಕ್ಕಪಕ್ಕದಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ ಉಳಿದಿದ್ದರು. ಕೊನೆಗೆ, ಅಭಿಮಾನಿಗಳ ನಿರೀಕ್ಷೆ ಹೆಚ್ಚಿದಾಗಲೇ ರೂಪೇಶ್ ಕೈ ಎತ್ತುವ ಮೂಲಕ ವಿನ್ನರ್ ಘೋಷಣೆ ಮಾಡಿದರು.
ಈ ಬಾರಿ ‘ಬಿಗ್ ಬಾಸ್ ಕನ್ನಡ’ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ದಕ್ಕಿದೆ. ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ತೆರಿಗೆ ರೂಪದಲ್ಲಿ ಕಟ್ ಆಗಲಿದೆ. ಆ ಪ್ರಕಾರ, ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಗಲಿದೆ.
The wait is over. Actor-RJ Roopesh Shetty has won the title of Bigg Boss Kannada 9. In an exciting Grand Finale, full of entertainment, the Mangaluru boy was declared the winner. Roopesh Shetty received the trophy and prize money of Rs. 50 lacs. Not just the winner of Bigg Boss Kannada season 9, Roopesh had earlier emerged as the topper of the premiere season of Bigg Boss Kannada OTT.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm