ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm