ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm