ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm