ಬ್ರೇಕಿಂಗ್ ನ್ಯೂಸ್
02-01-23 09:50 pm HK News Desk ಕರ್ನಾಟಕ
ಮೈಸೂರು, ಜ.2 : ಜೆಡಿಎಸ್ ಒಂದು ಕುಟುಂಬದ ಪಾಲಿನ ಎಟಿಎಂ ಎಂದು ಟೀಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಅಮಿತ್ ಷಾ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕಾಲಿನ ಉಗುರಿಗೂ ಸಮ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳುವ ಅಮಿತ್ ಶಾ ಒಂದೇ ಒಂದು ಭ್ರಷ್ಟಾಚಾರವನ್ನಾದ್ರೂ ಜನರ ಮುಂದಿಡಬೇಕಿತ್ತು. ಆದರೆ ಜೆಡಿಎಸ್ ಪಕ್ಷದ ಭಯದಿಂದ ಬಾಯಿಗೆ ಬಂದಹಾಗೆ ಹೇಳಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ಅಥವಾ ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಕುಟುಂಬ ಒಂದೇ ಒಂದು ಭ್ರಷ್ಟಾಚಾರ ಮಾಡಿದ್ದರೆ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು. ಇದೇ ಅಮಿತ್ ಶಾ ತನ್ನ ಮಗನಿಗೆ ಬಿಸಿಸಿಐ ವಾರಸುದಾರಿಕೆ ಯಾವ ಅರ್ಹತೆ ಪ್ರತಿಭೆ ಮೇಲೆ ಕೊಡಿಸಿದ್ದಾರೆ ಗೊತ್ತು. ಇವರ ಪಕ್ಷದ ಭ್ರಷ್ಟಾಚಾರದಿಂದ ಬೇಸತ್ತು ಜನ ಸಾಯುತ್ತಿದ್ದಾರೆ. ಮೊನ್ನೆ ತುಮಕೂರಿನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದ, ನಿನ್ನೆ ಬೆಂಗಳೂರಿನಲ್ಲಿ ಇವರ ಪಕ್ಷದ ಶಾಸಕರ ಹೆಸರನ್ನು ಬರೆದು ಇವರ ಪಕ್ಷದ್ದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ನೀಡಿರುವ ಹೊಸ ವರುಷದ ಕೊಡುಗೆ ಎಂದು ಲೇವಡಿ ಮಾಡಿದರು.

ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಯಾರು ಇವರ ಮನೆ ಬಾಗಿಲಿಗೆ ಅರ್ಜಿ ಹಿಡಿದುಕೊಂಡು ಹೋಗಿದ್ದರು. 2008 ರಲ್ಲಿ ಇದೇ ಬಿಜೆಪಿಯವರು ಜೆಡಿಎಸ್ ಮನೆ ಬಾಗಿಲ ಬಳಿ ನಿಂತಿದ್ದರು ಎಂದು ಕುಟುಕಿದರು.
ದೆಹಲಿ ನಾಯಕರಿಂದ ರಾಜ್ಯದಲ್ಲಿ ಕಮಲ ಅರಳಲಿಲ್ಲ, ರಾಜ್ಯದ ಕೆಲವು ಸಂದರ್ಭಗಳಿಂದ ವೀರಶೈವ ಸಮುದಾಯ ಯಡಿಯೂರಪ್ಪನವರ ಜೊತೆ ನಿಂತ ಕಾರಣಕ್ಕೆ ಬಿಜೆಪಿ ಅಸ್ಥಿತ್ವಕ್ಕೆ ಬಂದಿತ್ತು. ಆದರೆ ಅದೇ ಯಡಿಯೂರಪ್ಪ ನವರನ್ನು ಕೇಂದ್ರ ನಾಯಕರು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತು. ಬಸವರಾಜ ಬೊಮ್ಮಾಯಿ ಬರಿ ಹೆಸರಿಗಷ್ಟೇ ಮುಖ್ಯಮಂತ್ರಿ. ಎಲ್ಲಾ ಕೇಂದ್ರದ ನಾಯಕರು ಹೇಳಿದ ಹಾಗೆ ಕೇಳಬೇಕು ಎಂದು ಹೇಳಿದರು.

ಬಿಜೆಪಿ ವಿರುದ್ಧ ಯಾರು ಶಕ್ತಿಯುತವಾಗಿ ಇರುತ್ತಾರೋ ಅವರನ್ನು ಐಟಿ, ಇಡಿ ಮೂಲಕ ಹೆದರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿದರೂ ನಾನು ಹೆದರುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಈಗಾಗಲೇ ಸಿಸೋಡಿಯಾ ಮತ್ತು ಕೆ.ಸಿ.ಆರ್. ಪುತ್ರಿ ಮೇಲೆ ಐಟಿ ರೇಡ್ ಮಾಡಿಸಿದ್ದಾರೆ. ನನ್ನ ಮೇಲೆ ಅದ್ಯಾವ ಐಟಿ, ಇಡಿ ಕಳುಹಿಸುತ್ತಾರೋ ನೋಡುತ್ತೇನೆ ಎಂದು ಹೇಳಿದರು.
Former SEI H.D. Kumaraswamy hit back at Union Home Minister Amit Shah who attacked the JDS leaders while addressing the Janasankalpa Yatra in Mandya last Friday.Former CM HDK, who spoke about this in Mysore, has publicly criticized Union Home Minister Amit Shah Mandya saying that it is a family ATM. In any case, when Deve Gowda was the PM, when I was the CM, he challenged me to show a single case if the government treasury was looted.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm