ಬ್ರೇಕಿಂಗ್ ನ್ಯೂಸ್
03-01-23 01:27 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಯಲಿ, ಸಾಕ್ಷಿನಾಶ ಆಗದಂತೆ ತಡೆಯಲು ಶಾಸಕ ಅರವಿಂದ ಲಿಂಬಾವಳಿ ಅವರನ್ನು ಪೊಲೀಸರು ಬಂಧಿಸಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಎರಡು ದಿನದ ಹಿಂದೆ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ಕೆಪಿಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರೊಂದಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪತ್ನಿ ಪ್ರದೀಪ್ಗೆ ನ್ಯಾಯ ಕೊಡಿಸಿ ಎಂದು ಅವರ ಪತ್ನಿ ಹೇಳಿದ್ದಾರೆ. 1.5 ಕೋಟಿ ರೂ. ಹೂಡಿಕೆ ಮಾಡಿದ್ದೆವು, ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಎನ್ನುವುದು ಇವರ ವಾದ.
ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್ಗೆ ಪ್ರಯತ್ನ ಮಾಡಿದ್ದಾರೆ. ಡೆತ್ ನೋಟ್ನಲ್ಲಿ 6 ಜನರ ಹೆಸರು ಇದೆ. ಲಿಂಬಾವಳಿ ಹೆಸರೂ ಇದೆ. ಈಗಾಗಲೇ ಎಫ್ಐಆರ್ ದಾಕಲಾಗಿದ್ದು, ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು.
ಕೂಡಲೇ ಎಲ್ಲರನ್ನೂ ಬಂಧಿಸಬೇಕು. ಸಾವಿಗೆ ಕಾರಣವಾದರ ಮೇಲೆ ಕಾನೂನು ಕ್ರಮ ಆಗಬೇಕು. ಶಿಕ್ಷೆ ಆಗುವಂತೆ ಮಾಡಬೇಕು. ಶಾಸಕರೇ ಇರಲಿ, ಯಾರೇ ಇರಲಿ, ತಪ್ಪು ಯಾರೇ ಮಾಡಿದರೂ ತಪ್ಪೆ. ಕಾನೂನು ಪ್ರಕಾರ ಕ್ರಮ ಆಗಬೇಕು. ಶಾಸಕರನ್ನೂ ಬಂಧನ ಮಾಡಬೇಕು. ಇಲ್ಲದೇ ಹೋದರೆ ಸಾಕ್ಷಿ ನಾಶ ಮಾಡಬಹುದು. ಪೊಲೀಸರು ಪ್ರದೀಪ್ ಅವರ ಮನೆಯವರ ಮೊಬೈಲ್ ಕೇಳುತ್ತಿದ್ದಾರಂತೆ. ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ, ಇದಕ್ಕೆ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಹೇಳಿದರು. 3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ಟರು. ಇದೇ ಪರಿಸ್ಥಿತಿ ಈ ಕೇಸ್ನಲ್ಲಿಯೂ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಸರ್ಕಾರದ ಅವಧಿಯಲ್ಲಿ ಅನೇಕ ಜನ ಸಾಯುವುದು, ದಯಾ ಮರಣ ಕೋರುವುದು ಆಗುತ್ತಿದೆ. ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೇ ಇರುವುದಕ್ಕೆ ಹೀಗೆ ಆಗುತ್ತಿದೆ. ಈ ಪ್ರಕರಣದಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023
Businessman suicide case, Bjp MLA Limbavali should be arrested soon demands senior congress leader Siddaramaiah after he visited their residence to give his condolences.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm