ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm