ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm