ಬ್ರೇಕಿಂಗ್ ನ್ಯೂಸ್
10-01-23 04:09 pm HK News Desk ಕರ್ನಾಟಕ
ಶಿವಮೊಗ್ಗ, ಜ.10: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
Sagar attack on Bajrang dal activist, three arrested, accused sister ragged reason for attack. Bajrang Dal workers staged a flash protest in front of Sagar town police station on Monday after one of its workers escaped unhurt when a person tried to attack him with a sharp weapon.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm