ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am