ಬ್ರೇಕಿಂಗ್ ನ್ಯೂಸ್
14-01-23 07:07 pm HK News Desk ಕರ್ನಾಟಕ
ಮಂಡ್ಯ, ಜ.14: ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೇ ನಿಮಿಷಾಂಬಾ ದೇವಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್
ಕಳೆದ ೧೨ ದಿನಗಳಿಂದ ಭಾರಿ ತಲೆನೋವಾಗಿದ್ದ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಬಂಧಿಸಿದ್ದರಿಂದ ತುಂಬಾ ನಿರಾಳರಾದವರು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಅಲೋಕ್ ಕುಮಾರ್.
ಸ್ಯಾಂಟ್ರೋ ರವಿಯ ವಿಚಾರದಲ್ಲಿ ದಿನಕ್ಕೊಂದು, ಕ್ಷಣಕ್ಕೊಂದು ಪ್ರಶ್ನೆಗಳನ್ನು ಎದುರಿಸಿದ ಅವರು ಬಂಧನವಾಗದೆ ಯಾವ ಉತ್ತರವನ್ನೂ ನೀಡುವ ಹಾಗಿರಲಿಲ್ಲ. ಯಾಕೆಂದರೆ, ಪೊಲೀಸರೇ ಸ್ಯಾಂಟ್ರೋ ರವಿಯನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ, ಅವರೇ ರಕ್ಷಿಸುತ್ತಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ನಡುವೆ, ಇದೀಗ ಎಡಿಜಿಪಿ ನಿರಾಳರಾಗಿದ್ದಾರೆ. ಹಾಗಾಗಿ ಅವರು ಶನಿವಾರ ಗಂಜಾಂನ ನಿಮಿಷಾಂಬ ದೇವಾಲಯಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ನಿಜವೆಂದರೆ, ಸ್ಯಾಂಟ್ರೋ ರವಿ ಬಂಧನವಾಗದೆ ಭಾರಿ ಅಪಮಾನ ಸಂಕಟ ಎದುರಿಸಿದ್ದ ಎಡಿಜಿಪಿ ಅವರು ನಾಲ್ಕು ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಬಂದು ಸ್ಯಾಂಟ್ರೋ ರವಿ ಬಂಧನವಾದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೇಳಿಕೊಂಡಿದ್ದರು. ಹೀಗಾಗಿ ರವಿ ಬಂಧನ ಖಚಿತಪಡಿಸಿದ ೨೬ ಗಂಟೆಗಳಲ್ಲೇ ದೇವಸ್ಥಾನಕ್ಕೆ ಬಂದು ಹರಕೆ ತೀರಿಸಿದರು.

ದೇವಿಯ ಮೇಲೆ ನನಗೆ ಅಪಾರವಾದ ನಂಬಿಕೆ. ೨೦೧೧ರಲ್ಲಿ ಮೈಸೂರಿನಲ್ಲಿ ಒಂದು ಡಬಲ್ ಮರ್ಡರ್ ಆಗಿತ್ತು. ಆಗಲೂ ಇಲ್ಲಿ ಬಂದು ದೇವರಿಗೆ ಹರಕೆ ಹೊತ್ತಿದ್ದೆ. ಹರಕೆ ಹೊತ್ತು ಮೈಸೂರಿಗೆ ಮರಳುವಷ್ಟರಲ್ಲಿ ಅಂದರೆ ಸುಮಾರು ೫ ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಬಾರಿ ಕಳೆದ ೧೦ನೇ ತಾರೀಕಿನಂದು ಇಲ್ಲಿಗೆ ಬಂದು ಸ್ಯಾಂಟ್ರೋ ರವಿ ಬಂಧನವಾಲಿ ಎಂದು ಹರಕೆ ಹೊತ್ತಿದ್ದೆ. ನಾನು ಹರಕೆ ಹೊತ್ತ ಒಂದೆರಡೇ ದಿನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ದೇವಿಯ ಮೇಲೆ ನಾನಿಟ್ಟ ನಂಬಿಕೆ ನಿಜವಾಗಿದೆ. ಹಾಗಾಗಿ ತಕ್ಷಣವೇ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ದೇವಸ್ಥಾನದಲ್ಲಿ ಮಾತನಾಡಿದ ಅಲೋಕ್ ಕುಮಾರ್ ಹೇಳಿದರು.
ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರದ ಮೇಲೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿತ್ತು. ಹೀಗಾಗಿ ಆದಷ್ಟು ಬೇಗನೆ ಆತನ ಬಂಧನ ಆಗಲಿ ಎಂದು ಹಾರೈಸಿದ್ದೆ. ಅದು ನಿಜವಾಗಿದೆ. ಇನ್ನು ಮುಂದೆ ಆತನ ವಿಚಾರಣೆಯನ್ನು ಸಮಗ್ರವಾಗಿ ನಡೆಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
Adgp Alok Kumar visits Mandya temple for the successful arrest of Santro Ravi.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm