ಬ್ರೇಕಿಂಗ್ ನ್ಯೂಸ್
16-01-23 06:14 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂರು ವರ್ಷಗಳ ಆಡಳಿತದ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಮೂಲಕ 1.5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ವತಿಯಿಂದ ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿರುವ 'ನಾ ನಾಯಕಿ' ಸಮಾವೇಶದಲ್ಲಿ ಮಾತನಾಡಿದ ಅವರು, 'ಇಲ್ಲಿನ ಸರ್ಕಾರ ಯಾವ ಕೆಲಸ ಮಾಡಿದರೂ ಶೇ 40ರಷ್ಟು ಲಂಚ ಪಡೆಯುತ್ತಿದೆ. ಜನರ ತೆರಿಗೆಯ ಹಣ ಲಂಚದ ರೂಪದಲ್ಲಿ ಸರ್ಕಾರದಲ್ಲಿರುವ ಕೆಲವರ ಜೇಬು ಸೇರುತ್ತಿದೆ' ಎಂದರು.

ಬಿಬಿಎಂಪಿಯಲ್ಲಿ 8,000 ಕೋಟಿ ಮೊತ್ತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರೆ, 3,200 ಕೋಟಿ (ಶೇ 40) ಸರ್ಕಾರದಲ್ಲಿರುವವರಿಗೆ ಸಂದಾಯ ಆಗುತ್ತಿದೆ. ಜನರ ಹಣದ ಲೂಟಿ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರವು ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಸಾಕ್ಷಿ ಎಂದರು.
ವಾಹನ ಚಾಲನಾ ಪರವಾನಗಿ, ನೋಂದಣಿ ಎಲ್ಲದಕ್ಕೂ ಲಂಚ ಕೊಡಬೇಕು. ಅಧಿಕಾರಿಗಳ ನೇಮಕ, ವರ್ಗಾವಣೆ, ಸ್ಥಳ ನಿಯುಕ್ತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಹೇಳಿದರು.


ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೆ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೆ' ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದರು.



ಭ್ರಷ್ಟಾಚಾರದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅನೇಕ ಕಸರತ್ತು ಮಾಡುತ್ತಿದ್ದಾರೆ. ಮಕ್ಕಳ ಕಲಿಕೆಯ ಪಠ್ಯಕ್ರಮಕ್ಕೂ ಕೈ ಹಾಕಿದ್ದಾರೆ. ಬಸವಣ್ಣ ಸೇರಿದಂತೆ ಅನೇಕ ಮಹನೀಯರಿಗೆ ಸಂಬಂಧಿಸಿದ ಪಠ್ಯಗಳನ್ನು ತಿರುಚಿದ್ದಾರೆ. ಇದೆಲ್ಲವೂ ಕೆಲವರ ಆಣತಿಯಂತೆ ನಡೆದಿದೆ ಎಂದು ದೂರಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುಸ್ತರವಾಗಿದೆ. ಡಾ. ಮನಮೋಹನ್ ಸಿಂಗ್ ಸರ್ಕಾರದ ಅವಧಿಗೆ ಹೋಲಿಸಿದರೆ ಎಲ್ಪಿಜಿ ಸಿಲಿಂಡರ್ ದರ ದುಪ್ಪಟ್ಟಿಗಿಂತ ಜಾಸ್ತಿಯಾಗಿದೆ ಎಂದು ದೂರಿದರು.
PSI Scam Shameful Priyanka Gandhis Attack On BJP Ahead Of Karnataka Polls 2023. The Congress in Karnataka offered a Rs 2,000 monthly stipend to every housewife if elected, declared party leader Priyanka Gandhi Vadra during a convention in Bengaluru on Monday, news agency PTI reported.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm