ಬ್ರೇಕಿಂಗ್ ನ್ಯೂಸ್
16-01-23 07:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.16 : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ವೈಭವ್ ಪಟೇಲ್ ಎಂಬುವರನ್ನು ಅಡ್ಡಗಟ್ಟಿ ಗಾಂಜಾ ಸೇವನೆ ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ 2,500 ರೂ. ಸುಲಿಗೆ ಮಾಡಿದ್ದ ಆರೋಪದಡಿ ಕಾನ್ಸ್ಟೆಬಲ್ಗಳಾದ ಮಲ್ಲೇಶ್ ಹಾಗೂ ಕೀರ್ತಿಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಜ.11ರಂದು ತಡರಾತ್ರಿ ನಡೆದಿದ್ದ ಘಟನೆ ಸಂಬಂಧ ವೈಭವ್ ಪಟೇಲ್ ಅವರು ಟ್ವೀಟ್ ಮೂಲಕ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಬಳಿಕ ವೈಭವ್ ಅವರನ್ನು ಸಂಪರ್ಕಿಸಿದ್ದ ಡಿಸಿಪಿ ಸಿ.ಕೆ.ಬಾಬಾ, ಲಿಖಿತ ದೂರು ಪಡೆದು ತನಿಖೆ ನಡೆಸಿದ್ದರು.
ಇಬ್ಬರು ಕಾನ್ಸ್ಟೆಬಲ್ಗಳು ಹಣ ಸುಲಿಗೆ ಮಾಡಿದ್ದ ಸಂಗತಿ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ, ಇಬ್ಬರನ್ನೂ ಅಮಾನತು ಮಾಡಿ ಸಿ.ಕೆ.ಬಾಬಾ ಆದೇಶ ಹೊರಡಿಸಿದ್ದಾರೆ.

ದೂರಿನ ವಿವರ:
‘ಜ. 11ರಂದು ತಡರಾತ್ರಿ ಕೆಲಸ ಮುಗಿಸಿ ರ್ಯಾಪಿಡೊ ಬೈಕ್ನಲ್ಲಿ ಮನೆಯತ್ತ ಹೊರಟಿದ್ದೆ. ಎಚ್ಎಸ್ಆರ್ ಲೇಔಟ್ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಗಸ್ತಿನಲ್ಲಿದ್ದ ಇಬ್ಬರು ಬಂಡೇಪಾಳ್ಯ ಠಾಣೆಯ ಪೊಲೀಸರು ಬೈಕ್ ಅಡ್ಡಗಟ್ಟಿದ್ದರು. ಎಲ್ಲಿಗೆ ಹೊರಟಿದ್ದೀರಾ ಎಂದು ಪ್ರಶ್ನಿಸಿ ಬ್ಯಾಗ್ ಪರಿಶೀಲಿಸಿದ್ದರು. ಇದೇ ವೇಳೆ ಗಮನಕ್ಕೆ ಬಾರದಂತೆ ಬ್ಯಾಗ್ನಲ್ಲಿ ಯಾವುದೋ ಸೊಪ್ಪು ಇರಿಸಿದ್ದರು’ ಎಂದು ವೈಭವ್ ಅವರು ಟ್ವೀಟ್ನಲ್ಲಿ ತಿಳಿಸಿದ್ದರು.
ಬ್ಯಾಗ್ನಿಂದ ಸೊಪ್ಪು ಹೊರಗೆ ತೆಗೆದಂತೆ ನಟಿಸಿದ್ದ ಪೊಲೀಸರು, ಗಾಂಜಾ ಸೇವನೆ ಮಾಡುತ್ತೀಯಾ? ಎಂದು ಬೆದರಿಸಿದ್ದರು. ಗಾಂಜಾ ಸೇವಿಸುವುದಿಲ್ಲ ಎಂದು ಬೇಡಿಕೊಂಡಿದ್ದೆ. ‘ನಿನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಜೈಲಿಗೆ ಹಾಕಿದರೆ, ನಮಗೆ ತಲಾ 15 ಸಾವಿರ ಬಹುಮಾನ ಬರಲಿದೆ’ ಎಂದಿದ್ದರು. ನಾನು ಗಾಂಜಾ ಸೇವಿಸಿಲ್ಲವೆಂದರೂ ತಪ್ಪೊಪ್ಪಿಕೊಳ್ಳುವಂತೆ ಪೀಡಿಸಿದರು.
‘ಸುಲಿಗೆ ಮಾಡುವುದೇ ಪೊಲೀಸರ ಉದ್ದೇಶವಾಗಿತ್ತು. ಹೀಗಾಗಿಯೇ ಅವರು ಪ್ರಕರಣ ದಾಖಲಿಸುವ ಬೆದರಿಕೆಯೊಡುತ್ತಿದ್ದರು. ನನ್ನನ್ನು ಬಿಡಲು ಏನು ಮಾಡಬೇಕೆಂದು ಕೇಳಿದ್ದೆ. ಆಗ ಅವರು, ಜೇಬಿನಲ್ಲಿದ್ದ ಪರ್ಸ್ ತೆಗೆದುಕೊಂಡು 2,500 ಕಿತ್ತುಕೊಂಡರು. ಎಟಿಎಂ ಘಟಕಕ್ಕೆ ಹೋಗಿ ಪುನಃ 4 ಸಾವಿರ ತರುವಂತೆ ಹೇಳಿದರು. ಖಾತೆಯಲ್ಲಿ ಹಣವಿಲ್ಲವೆಂದು ಹೇಳಿ ಗೋಗರೆದ ಬಳಿಕವೇ ನನ್ನನ್ನು ಬಿಟ್ಟು ಕಳುಹಿಸಿದರು’ ಎಂದೂ ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.
Karnataka Police have suspended two police constables on Monday in connection with charges of planting ganja (marijuana) in the bag of a youth and extorting money from him in Bengaluru. South East DCP C.K. Baba in Bengaluru confirmed that the inquiry against the two accused constables has been completed and disciplinary action initiated based on the report submitted by the investigating officer. Prima facie it had been confirmed that the two had misused their power.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm