ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.


ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.


‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm