ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 09:15 pm
HK News Desk
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
20-06-25 09:54 pm
Dinesh, Mangaluru
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm