ಬ್ರೇಕಿಂಗ್ ನ್ಯೂಸ್
20-01-23 05:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.20: ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ.
ಬೆಂಗಳೂರಿನ ಉಲ್ಲಾಳದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಅಪಘಾತ ಪ್ರಕರಣದಲ್ಲಿ ನಡೆದ ಗಲಾಟೆ ವೇಳೆ ಅಲ್ಲಿಂದ ತೆರಳುತ್ತಿದ್ದ ಕಾರನ್ನು ತಡೆಯಲು ಹೋದ ವ್ಯಕ್ತಿ ಕಾರಿನ ಬಾನೆಟ್ ಹಿಡಿದಿದ್ದಾನೆ. ಈ ವೇಳೆ ಕಾರು ಚಲಾಯಿಸುತ್ತಿದ್ದ ಚಾಲಕಿ ಆತನ ಸಹಿತ ಸುಮಾರು 2ಕಿಮೀ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಈ ಕುರಿತ ವಿಡಿಯೋವನ್ನು ಸ್ಥಳೀಯರ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಮುಖ್ಯರಸ್ತೆಯ ಜಂಕ್ಷನ್ ಬಳಿ ನಡೆದಿರುವ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಏನಿದು ಘಟನೆ?
ಉಲ್ಲಾಳ ಉಪನಗರ ರಸ್ತೆಯಲ್ಲಿ ಪ್ರಿಯಾಂಕಾ ಮತ್ತು ಆಕೆಯ ಪತಿ ಟಾಟಾ ನೆಕ್ಸಾನ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಒನ್ ವೇ ನಲ್ಲಿ ಸ್ವಿಫ್ಟ್ ಕಾರಿನಲ್ಲಿ ಬಂದ ದರ್ಶನ್ ಅವರ ಕಾರಿಗೂ ನೆಕ್ಸಾನ್ ಕಾರಿನ ನಡುವೆ ಢಿಕ್ಕಿಯಾಗಿದೆ. ಈ ವೇಳೆ ದರ್ಶನ್ ಮತ್ತು ಪ್ರಿಯಾಂಕಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪ್ರಿಯಾಂಕಾ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಗಲಾಟೆ ಸಂದರ್ಭದಲ್ಲೇ ದರ್ಶನ್ ಮತ್ತು ಸ್ನೇಹಿತರ ತಂಡ ಸ್ಥಳದಲ್ಲಿ ಸೇರುತ್ತಲೇ ಗಲಿಬಿಲಿಗೊಂಡ ಪ್ರಿಯಾಂಕಾ ಕಾರನ್ನು ಹತ್ತಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ದರ್ಶನ್ ಪ್ರಿಯಾಂಕಾ ಅವರ ನೆಕ್ಸಾನ್ ಕಾರಿನ ಬಾನೆಟ್ ಹಿಡಿದುಕೊಂಡಿದ್ದಾರೆ. ಆದಾಗ್ಯೂ ಪ್ರಿಯಾಂಕಾ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ.
ಇದೇ ಸ್ಥಿತಿಯಲ್ಲೇ ಪ್ರಿಯಾಂಕಾ ಕಾರು ಚಲಾಯಿಸಿಕೊಂಡು 2 ಕಿ.ಮೀ.ವರೆಗೂ ಹೋಗಿದ್ದು, ಕೆಲ ಯುವಕರು, ದ್ವಿಚಕ್ರ ವಾಹನಗಳಲ್ಲಿ ಬೆನ್ನಟ್ಟಿದ್ದರು. ಪ್ರಿಯಾಂಕಾ ಕಾರನ್ನು ಅಡ್ಡಗಟ್ಟಿ ಕಾರು ನಿಲ್ಲಿಸಿದ್ದಾರೆ. ಅಲ್ಲದೆ ಕಾರಿನ ಮೇಲೆ ಕಲ್ಲುಗಳ ಮೂಲಕ ದಾಳಿ ಮಾಡಿದ್ದು ಕಾರಿನ ಎಲ್ಲ ಗ್ಲಾಸ್ ಗಳು ಪುಡಿಪುಡಿಯಾಗಿವೆ. ಪ್ರಸ್ತುತ ಎರಡೂ ಕಾರುಗಳನ್ನು ಜ್ಞಾನಭಾರತಿ ಪೊಲೀಸರು ಜಪ್ತಿ ಮಾಡಿದ್ದು, ದರ್ಶನ್ ಮತ್ತು ಗ್ಯಾಂಗ್, ಪ್ರಿಯಾಂಕಾ ಮತ್ತು ಆಕೆಯ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಪಘಾತದ ನಂತರ ಮತ್ತೊಂದು ಕಾರಿನ ಚಾಲಕ ದರ್ಶನ್ ಅವರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದಿದ್ದಕ್ಕಾಗಿ ಚಾಲಕಿ ಪ್ರಿಯಾಂಕಾ ವಿರುದ್ಧ ಯು/ಎಸ್ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ದರ್ಶನ್, ಯಶವಂತ್, ಸುಜನ್ ಮತ್ತು ವಿನಯ್ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಎಫ್ ಆರ್ ದಾಖಲಾಗಿದೆ.
#Bengaluru police has registered 307 case in a case of negligent and rash driving against a lady named Priyanka. She had dragged Darshan for almost a km who was hanging on to the bonnet of her car. They had an altercation over overtaking car. Case also against 4 others.#Karnataka pic.twitter.com/OQW5gukjgK
— Imran Khan (@KeypadGuerilla) January 20, 2023
Another incident of dragging in #Bengaluru, a woman has dragged a man sitting on her SUV’s bonnet for 3 km in Ullal Main Road, Jnanabarathi on Friday morning in a road rage. A case & counter case has been filed against the woman and the man climbing SUV bonnet.@DeccanHerald pic.twitter.com/ZV4Qm2d6AD
— Chaithanya (@ChaithanyaSwamy) January 20, 2023
In yet another incident of dragging in Bengaluru, a man on an SUV bonnet was dragged for 3 km on Ullal Main Road, Jnanabarathi, on the morning of November 20. A case and a countercase have been filed against the man and the woman who was behind the wheel.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm