ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.

ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm