ಬ್ರೇಕಿಂಗ್ ನ್ಯೂಸ್
23-01-23 05:22 pm HK News Desk ಕರ್ನಾಟಕ
ಹಾವೇರಿ, ಜ.23: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳಿಗೆ ಈಗ ಮತದಾರನೇ ಮನೆ ದೇವರು. ಹೇಗಾದರೂ ಮತ್ತೆ ಗೆದ್ದು ಬರಬೇಕೆಂಬ ಗುಂಗಿನಲ್ಲಿ ಮತದಾರನ ಓಲೈಕೆಗೆ ತೊಡಗಿದ್ದಾರೆ. ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಪಕ್ಷೇತರ ಶಾಸಕ, ಮಾಜಿ ಸಚಿವ ಆರ್.ಶಂಕರ್ ಮತದಾರರಿಗೆ ಕುಕ್ಕರ್ ಕೊಡಲು ಶುರು ಮಾಡಿದ್ದಾರೆ.
ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಜನತೆಗೆ ಆರ್. ಶಂಕರ್ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ಮನೆ ಮನೆಗೆ ತೆರಳಿ ಶಂಕರ್ ಬೆಂಬಲಿಗರು ಕೂಪನ್ ನೀಡುತ್ತಿದ್ದು, ಅದನ್ನು ನಿಗದಿತ ಅಂಗಡಿಯಲ್ಲಿ ತೋರಿಸಿದರೆ ಕುಕ್ಕರ್ ಉಚಿತ ಸಿಗುತ್ತದೆ.
"ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್ ಶಂಕರ್" ಅಂತ ಕುಕ್ಕರ್ ಮೇಲೆ ಬರೆದಿದ್ದು ಅದನ್ನು ರಹಸ್ಯವಾಗಿ ಹಂಚಿಕೆ ಮಾಡಲಾಗುತ್ತಿದೆ. ಬಿಜೆಪಿ ಎಂ.ಎಲ್ ಸಿ, ಮಾಜಿ ಸಚಿವ ಆರ್ ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಓಕೆ, ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ರೆಡಿಯಾಗಿದ್ದಾರೆ.

ಈ ನಡುವೆ, ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗೇ ಹರಿದಾಡ್ತಿದೆ. ಕಳೆದ 2018 ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಹೆಸರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಚುನಾವಣೆ ಬಳಿಕ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್ ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆಗೆ ವಿಲೀನಗೊಳಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅಬಕಾರಿ ಸಚಿವ ಖಾತೆಯನ್ನೂ ಪಡೆದಿದ್ದರು. ಆದರೆ, ಬಳಿಕ ಬಿಜೆಪಿ ದಾಳಕ್ಕೆ ಸಿಲುಕಿ ಆಪರೇಷನ್ ಕಮಲಕ್ಕೊಳಗಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರೂ ಉಪ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಯಡಿಯೂರಪ್ಪ ಮಾತ್ರ ಅವರನ್ನು ಸಚಿವರನ್ನಾಗಿಸುವ ನೀಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯನಾಗಿ ಮಾಡಿದ್ದರು. ಆದರೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದರು.
ಹೀಗಾಗಿ ಅತ್ತಲೂ ಇಲ್ಲ ಇತ್ತಲೂ ಎಂಬಂತಾಗಿ ರಾಜಕೀಯ ದಾಳಕ್ಕೆ ಸಿಲುಕಿ ಕಂಗಾಲಾಗಿದ್ದರು. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಶಂಕರ್ ರೆಡಿಯಾಗಿದ್ದು ಕಾಂಗ್ರೆಸ್, ಬಿಜೆಪಿ ಯಾರು ಸೀಟು ಕೊಟ್ಡರೂ ಸೈ ಎನ್ನುವ ಇರಾದೆಯಲ್ಲಿದ್ದಾರೆ. ಎಲ್ಲಿಯೂ ಸಿಗದಿದ್ದರೆ ಪಕ್ಷೇತರನಾಗಿಯೇ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
Cooker politics, R Shankar distributes free cooker with his pictures to voters in Haveri.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm