ಬ್ರೇಕಿಂಗ್ ನ್ಯೂಸ್
23-01-23 05:30 pm HK News Desk ಕರ್ನಾಟಕ
ಬೆಳಗಾವಿ, ಜ.23: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ.
ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು ಮುಚ್ಚಿಹಾಕಲು ಈ ರೀತಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಅವಿಭಾಜ್ಯ ಅಂಗ. ಸಂವಿಧಾನಾತ್ಮಕ ವಾಗಿ ರಚನೆಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಇದ್ದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಎ ಸಿ ಬಿ ಗೆ ಕೊಟ್ಟು ಮುಚ್ಚಿಹಾಕಿದರು ಎಂದು ಟೀಕಿಸಿದ ಮುಖ್ಯಮಂತ್ರಿಗಳು ಈಗ ಮತ್ತೆ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಮರು ಶಿಫಾರಸ್ಸು ಮಾಡುತ್ತಿದ್ದೇವೆ ಎಂದರು.
ಪ್ರತಿಪಕ್ಷ ಕಾಂಗ್ರೆಸ್ ಪ್ರತಿಯೊಂದಕ್ಕೂ ಬಹಿರಂಗ ಚರ್ಚೆಗೆ ಬನ್ನಿ ಎಂದು ಹೇಳುವದು ಹಾಸ್ಯಾಸ್ಪದವಾಗಿದೆ. ಈ ಹಿಂದೆ ಬೆಂಗಳೂರು ಅಧಿವೇಶನ ನಂತರ ಬೆಳಗಾವಿ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇವೆ ಎಂದು ನೋಟೀಸ್ ಕೊಟ್ಟಿದ್ದರು. ಅಧಿವೇಶನಕ್ಕಿಂತ ದೊಡ್ಡ ಬಹಿರಂಗ ಸಭೆಯ ಅಗತ್ಯವಿದೆಯಾ. ಇದನ್ನು ಇಡೀ ರಾಜ್ಯದ ಜನರು ನೋಡುತ್ತಾರೆ. ಇಲ್ಲಿ ಎದುರು ಬದುರು ಚರ್ಚೆ ನಡೆಯುತ್ತದೆ. ಆದರೆ ನೋಟೀಸ್ ಕೊಟ್ಟಿದ್ದ ಕಾಂಗ್ರೆಸ್ ನವರು ಓಡಿಹೋದರು. ಅಧಿವೇಶನದಲ್ಲಿ ಚರ್ಚೆ ಮಾಡದೆ ಭಾಷಣಕ್ಕಾಗಿ ಈ ರೀತಿ ಮಾತನಾಡುವದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಸುಳ್ಳನ್ನು ಹೇಳುವದರಲ್ಲಿ ಕೀಳುಮಟ್ಟದ ಹೇಳಿಕೆ ಕೊಡುವದರಲ್ಲಿ ಕಾಂಗ್ರೆಸ್ ನವರು ನಿಸ್ಸೀಮರು. ಇದು ನಮ್ಮ ರಾಜ್ಯದ ಸಂಸ್ಕೃತಿಯಲ್ಲ. ನಾವು ನಮ್ಮ ಸಂಸ್ಕೃತಿಯ ಚೌಕಟ್ಟಿನಲ್ಲಿರಬೇಕು ಎಂದು ಬೊಮ್ಮಾಯಿ ಹೇಳಿದರು.
Congress leaders are PHD holders in corruption, and masters in speaking lies slams CM Bommai in Belagavi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm