ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm