ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm