ಬ್ರೇಕಿಂಗ್ ನ್ಯೂಸ್
31-01-23 09:17 pm Bangalore Correspondent ಕರ್ನಾಟಕ
ಬೆಂಗಳೂರು, ಜ.31 : ವಿಜಯ್ ಮಲ್ಯ, ನೀರವ್ ಮೋದಿ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ. ಅವರನ್ನು ಏನೂ ಮಾಡದೆ ಬಿಡಲಾಗಿದೆ. ನಾನು ಕೇವಲ ಮೂರು-ನಾಲ್ಕು ಕೋಟಿಯಷ್ಟೇ ವಂಚನೆ ಮಾಡಿದ್ದೇನೆ. ನಿಮಗ್ಯಾಕೆ ಚಿಂತೆ, ನಾನು ನೋಡಿಕೊಳ್ಳುತ್ತೇನೆ. ಹೀಗೆಂದು ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಪೊಲೀಸರಿಗೆ ಪ್ರಶ್ನಿಸಿದ್ದಾನೆ.
ನಿವೇಶನ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸುತ್ತಿದ್ದ ತಿಪಟೂರು ಮೂಲದ ಲೋಕೇಶ್(43)ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದು ವಿಚಾರಣೆ ವೇಳೆ ಈ ರೀತಿ ಪ್ರಶ್ನೆ ಮಾಡಿದ್ದಾನೆ.

ಆರೋಪಿ 2018ರಲ್ಲಿ ನಿವೇಶನ ಖರೀದಿ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದಿದ್ದು ಬಳಿಕ ಅವನ್ನೇ ಬಳಸಿ ನಕಲಿ ದಾಖಲೆ ಸೃಷ್ಟಿಸಿದ್ದು ಎಸ್ಬಿಐ ಬ್ಯಾಂಕ್ಗೆ ಸಲ್ಲಿಸಿ ಅದೇ ನಿವೇಶನದ ಮೇಲೆ 83 ಲಕ್ಷ ರೂ. ಸಾಲ ಪಡೆದಿದ್ದ. ಈ ಬಗ್ಗೆ ಬ್ಯಾಂಕ್ ಕಡೆಯಿಂದ ಶೇಷಾದ್ರಿಪುರ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಆರೋಪಿ ಲೋಕೇಶ್ ಸಹಚರರಾದ ಅಯೂಬ್ ಹಾಗೂ ನಾಗರಾಜ್ ಎಂಬವರನ್ನು ಬಂಧಿಸಿದ್ದರು. ಅಂದಿನಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಲೋಕೇಶ್ ಐದು ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಹಿಂದೆಯೂ ನಿವೇಶನ ಖರೀದಿಸುವ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ವಂಚಕ ಲೋಕೇಶ್ ಹಾಗೂ ಆತನ ಸಹಚರರ ವಿರುದ್ಧ ಶಂಕರಪುರ, ವಿದ್ಯಾರಣ್ಯಪುರ, ಜಿಗಣಿ, ಕೆ.ಜಿ.ನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಂಧನದ ಬಳಿಕವೂ ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಕೆಲಸ ಮುಂದುವರಿಸಿದ್ದರು.

ಪತ್ರಿಕೆಗಳಲ್ಲಿ ಬರುವ ನಿವೇಶನ ಮಾರಾಟದ ಜಾಹೀರಾತು ಹಾಗೂ ನಿವೇಶನಗಳಲ್ಲಿ ಅಂಟಿಸುವ ಮಾಹಿತಿ ಫಲಕಗಳಲ್ಲಿ ಸಂಪರ್ಕ ಸಂಖ್ಯೆ ಪಡೆದು ಬಳಿಕ ನಿವೇಶನ ಖರೀದಿಸುವ ನೆಪದಲ್ಲಿ ಮಾಲೀಕರಿಗೆ ಕರೆ ಮಾಡುತ್ತಿದ್ದ. ಬಳಿಕ ನಿವೇಶನ ಖರೀದಿಸುವುದಾಗಿ ವ್ಯವಹಾರ ಕುದುರಿಸುತ್ತಿದ್ದ. 20 ಸಾವಿರ ರೂ. ಮುಂಗಡ ಹಣ ಕೊಟ್ಟು ನಿವೇಶನದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದು ನಂತರ ತಾನೇ ನಕಲಿ ದಾಖಲೆ ಸೃಷ್ಟಿಸಿ ತನ್ನ ಸಹಚರರನ್ನು ಖರೀದಿದಾರರನ್ನಾಗಿ ತೋರಿಸಿ ಅದೇ ಜಾಗದ ಮೇಲೆ ಸಾಲ ಪಡೆಯುತ್ತಿದ್ದರು.
Why there is no arrest of Vijay Mallya, Nirav Modi, accused questions Police after his arrest on cheating in Bangalore.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm