ಬ್ರೇಕಿಂಗ್ ನ್ಯೂಸ್
31-01-23 09:17 pm Bangalore Correspondent ಕರ್ನಾಟಕ
ಬೆಂಗಳೂರು, ಜ.31 : ವಿಜಯ್ ಮಲ್ಯ, ನೀರವ್ ಮೋದಿ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ. ಅವರನ್ನು ಏನೂ ಮಾಡದೆ ಬಿಡಲಾಗಿದೆ. ನಾನು ಕೇವಲ ಮೂರು-ನಾಲ್ಕು ಕೋಟಿಯಷ್ಟೇ ವಂಚನೆ ಮಾಡಿದ್ದೇನೆ. ನಿಮಗ್ಯಾಕೆ ಚಿಂತೆ, ನಾನು ನೋಡಿಕೊಳ್ಳುತ್ತೇನೆ. ಹೀಗೆಂದು ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಪೊಲೀಸರಿಗೆ ಪ್ರಶ್ನಿಸಿದ್ದಾನೆ.
ನಿವೇಶನ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸುತ್ತಿದ್ದ ತಿಪಟೂರು ಮೂಲದ ಲೋಕೇಶ್(43)ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದು ವಿಚಾರಣೆ ವೇಳೆ ಈ ರೀತಿ ಪ್ರಶ್ನೆ ಮಾಡಿದ್ದಾನೆ.

ಆರೋಪಿ 2018ರಲ್ಲಿ ನಿವೇಶನ ಖರೀದಿ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದಿದ್ದು ಬಳಿಕ ಅವನ್ನೇ ಬಳಸಿ ನಕಲಿ ದಾಖಲೆ ಸೃಷ್ಟಿಸಿದ್ದು ಎಸ್ಬಿಐ ಬ್ಯಾಂಕ್ಗೆ ಸಲ್ಲಿಸಿ ಅದೇ ನಿವೇಶನದ ಮೇಲೆ 83 ಲಕ್ಷ ರೂ. ಸಾಲ ಪಡೆದಿದ್ದ. ಈ ಬಗ್ಗೆ ಬ್ಯಾಂಕ್ ಕಡೆಯಿಂದ ಶೇಷಾದ್ರಿಪುರ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಆರೋಪಿ ಲೋಕೇಶ್ ಸಹಚರರಾದ ಅಯೂಬ್ ಹಾಗೂ ನಾಗರಾಜ್ ಎಂಬವರನ್ನು ಬಂಧಿಸಿದ್ದರು. ಅಂದಿನಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಲೋಕೇಶ್ ಐದು ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಹಿಂದೆಯೂ ನಿವೇಶನ ಖರೀದಿಸುವ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ವಂಚಕ ಲೋಕೇಶ್ ಹಾಗೂ ಆತನ ಸಹಚರರ ವಿರುದ್ಧ ಶಂಕರಪುರ, ವಿದ್ಯಾರಣ್ಯಪುರ, ಜಿಗಣಿ, ಕೆ.ಜಿ.ನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಂಧನದ ಬಳಿಕವೂ ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಕೆಲಸ ಮುಂದುವರಿಸಿದ್ದರು.

ಪತ್ರಿಕೆಗಳಲ್ಲಿ ಬರುವ ನಿವೇಶನ ಮಾರಾಟದ ಜಾಹೀರಾತು ಹಾಗೂ ನಿವೇಶನಗಳಲ್ಲಿ ಅಂಟಿಸುವ ಮಾಹಿತಿ ಫಲಕಗಳಲ್ಲಿ ಸಂಪರ್ಕ ಸಂಖ್ಯೆ ಪಡೆದು ಬಳಿಕ ನಿವೇಶನ ಖರೀದಿಸುವ ನೆಪದಲ್ಲಿ ಮಾಲೀಕರಿಗೆ ಕರೆ ಮಾಡುತ್ತಿದ್ದ. ಬಳಿಕ ನಿವೇಶನ ಖರೀದಿಸುವುದಾಗಿ ವ್ಯವಹಾರ ಕುದುರಿಸುತ್ತಿದ್ದ. 20 ಸಾವಿರ ರೂ. ಮುಂಗಡ ಹಣ ಕೊಟ್ಟು ನಿವೇಶನದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದು ನಂತರ ತಾನೇ ನಕಲಿ ದಾಖಲೆ ಸೃಷ್ಟಿಸಿ ತನ್ನ ಸಹಚರರನ್ನು ಖರೀದಿದಾರರನ್ನಾಗಿ ತೋರಿಸಿ ಅದೇ ಜಾಗದ ಮೇಲೆ ಸಾಲ ಪಡೆಯುತ್ತಿದ್ದರು.
Why there is no arrest of Vijay Mallya, Nirav Modi, accused questions Police after his arrest on cheating in Bangalore.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm