ಬ್ರೇಕಿಂಗ್ ನ್ಯೂಸ್
03-02-23 11:33 am Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರ ಒಳಗಿನ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡೆಗೆ ಬೇಸತ್ತ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸಮಿತಿಯಲ್ಲಿ ಚರ್ಚಿಸದೆ, ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ತಮ್ಮದೇ ಭರವಸೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಹೀಗಾಗಿ ನಾಮಕೆವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಹಿರಿಯ ನಾಯಕ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ ಎನ್ನಲಾಗಿದೆ.
ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದರು ಎಂಬುದು ಮಾಹಿತಿ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೇ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದೇನೆ. ಆದರೂ ತನ್ನನ್ನು ಕಡೆಗಣಿಸಿ ಉಚಿತ ಯೋಜನೆಗಳನ್ನು ನಾಯಕರೇ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪರಮೇಶ್ವರ್ ರಾಜಿನಾಮೆ ಪಕ್ಷದ ಒಳಗಡೆ ಭಿನ್ನವಾದ ಸಂದೇಶ ಹೋಗಲಿದೆ ಎಂಬುದನ್ನು ಅರಿತ ಸುರ್ಜೇವಾಲಾ, ಪರಮೇಶ್ವರ್ ಅವರನ್ನು ಮನವೊಲಿಸಿದ್ದಾರೆ. ಪ್ರಬಲ ದಲಿತ ವರ್ಗಕ್ಕೆ ಸೇರಿರುವ ಪರಮೇಶ್ವರ್ ರಾಜಿನಾಮೆ ಪಕ್ಷದ ಕಾರ್ಯಕರ್ತರ ನಡುವೆ ಭಿನ್ನವಾದ ಸಂದೇಶ ನೀಡುವುದರಿಂದ ಅವರನ್ನು ಮನವೊಲಿಸಿ ಆ ಹುದ್ದೆಯಲ್ಲೇ ಮುಂದುವರಿಸುವ ಸಾಧ್ಯತೆಯಿದೆ.
Simmering discontent has reportedly erupted the congress party in the state.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm