ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
26-04-26 12:49 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm