ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm