ಬ್ರೇಕಿಂಗ್ ನ್ಯೂಸ್
15-02-23 07:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸತೀಶ್ ರೆಡ್ಡಿ ಹತ್ಯೆಗೆ ಕುಖ್ಯಾತ ರೌಡಿ ಗ್ಯಾಂಗ್ ಸ್ಕೆಚ್ ಹಾಕಿದ್ದ ಸ್ಫೋಟಕ ವಿಷಯ ಬಹಿರಂಗಗೊಂಡಿದೆ. ನಗರದ ವಿಲ್ಸನ್ ಗಾರ್ಡನ್ ನಾಗನ ತಂಡ ಶಾಸಕನ ಹತ್ಯೆಗೆ 2 ಕೋಟಿಗೆ ಸುಪಾರಿ ಪಡೆದಿದ್ದು ಶಾಸಕರ ಚಲನವಲನಗಳ ಬಗ್ಗೆ ನಿಗಾವಹಿಸಿದ್ದರು. ಆದರೆ ದಾಳಿಗೂ ಮುಂಚೆ ರೌಡಿಶೀಟರ್ ನಾಗನ ತಂಡದಿಂದಲೇ ವಿಷಯ ಬಹಿರಂಗಗೊಂಡಿದೆ.
ನಾಗನ ತಂಡದಲ್ಲಿದ್ದ ಚಿತ್ರದುರ್ಗದ ಮೂಲದ ಆಕಾಶ್ ಕೊಲೆಯ ಸುಳಿವು ಬಿಟ್ಟು ಕೊಟ್ಟಿದ್ದಾನೆ. ಸತೀಶ್ ರೆಡ್ಡಿ ಬೆಂಬಲಿಗ ಚಂದ್ರು ಕರೆ ಮಾಡಿದ್ದಾಗ ಆಕಾಶ್ ಕೊಲೆಯ ಸಂಚು ಬಾಯ್ಬಿಟ್ಟಿದ್ದಾನೆ. ನಂತರ ಎಚ್ಚೆತ್ತ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ರೌಡಿ ನಾಗನ ತಂಡ ಎಸ್ಕೇಪ್ ಆಗಿದೆ. ರೌಡಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಿತ್ತು. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಹತ್ಯೆ ಸುಪಾರಿ ಬಗ್ಗೆ ವಿಧಾನಸೌಧದಲ್ಲಿ ಸತೀಶ್ ರೆಡ್ಡಿ ಮಾತನಾಡಿ, ನನಗೆ ಮಂಗಳವಾರ ಸಂಜೆ ಪೊಲೀಸರು ಈ ಬಗ್ಗೆ ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಈ ವಿವಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಪಡೆದುಕೊಳ್ಳಲು ಸಿಎಂ ಸೂಚಿಸಿದರು. ಆದರೆ ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ . ನಾನು ಭಯ ಪಡುವುದಿಲ್ಲ. ಸುಪಾರಿ ಹಿಂದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ. ಆರೋಪಿಗಳು ನನ್ನ ಚಲನವಲನ ಮೇಲೆ ಗಮನ ಇಟ್ಟಿದ್ದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏನೇನು ಮಾಡಿದ್ದಾರೆ ಅಂತ ಪೊಲೀಸರು ಮಾಹಿತಿ ಪಡ್ಕೊಂಡಿದ್ದಾರೆ ಎಂದು ತಿಳಿಸಿದರು.
Plot to Murder bangalore MLA Satish Reddy, killers master plan leaked, two arrested. Wilson garden Rowdy shetter was given two crores to murder MLA.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm