ಬ್ರೇಕಿಂಗ್ ನ್ಯೂಸ್
22-02-23 05:28 pm HK News Desk ಕರ್ನಾಟಕ
ಕಾರವಾರ, ಫೆ.22: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನೂಟ ಸವಿದು ದೇವರ ದರ್ಶನ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.
ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಿ.ಟಿ ರವಿ ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ.
ಈ ವೇಳೆ ದೇವಸ್ಥಾನದ ಬಾಗಿಲಲ್ಲೇ ಶಾಸಕ ಸುನಿಲ್ ನಾಯ್ಕ್ ಹಾಗೂ ಕಮಿಟಿ ಸದಸ್ಯರಿಂದ ಸನ್ಮಾನ ಸಹ ಮಾಡಿದ್ದು, ಶಾಸಕರ ಜೊತೆ ಮೀನೂಟ ಸವಿಯುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿದ್ದರಾಮಯ್ಯ ಮಾಂಸ ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರು ಎಂದು ವಿವಾದ ಮಾಡಿದ ಬಿಜೆಪಿಗರು ಈಗೆಲ್ಲಿ ಹೋದರು ಎಂದು ಕಾಂಗ್ರಸಿಗರು ಪ್ರಶ್ನೆ ಮಾಡಿದ್ದು ಜಿಲ್ಲೆಯ ಸಾತ್ವಿಕ ಜನರು ಸಹ ಸಿಟಿ ರವಿ ವರ್ತನೆಗೆ ಕಿಡಿಕಾರಿದ್ದಾರೆ.
ನಾನು ಹುಟ್ಟಿರೋದೆ ಮಾಂಸ ತಿನ್ನುವ ಜಾತಿಯಲ್ಲಿ ;
ನಾನು ಹುಟ್ಟಿರೋದೆ ಮಾಂಸ ತಿನ್ನುವ ಜಾತಿಯಲ್ಲಿ, ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ವೈರಲ್ ಆಗಿದ್ದ ಫೋಟೋ ಕುರಿತು ಮಂಡ್ಯದಲ್ಲಿ ಸ್ಪಷ್ಟನೆ ನೀಡಿದ ಅವರು, ಭಟ್ಕಳಕ್ಕೆ ಹೋದಾಗ ನಾಗಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿತ್ತು. 45 ದಿನಗಳು ಓಪನ್ ಇರಲಿಲ್ಲ. ನಾಗಬನದ ಹೊರಾವರಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ ಎಂದು ಹೇಳಿದರು.
ನನಗೆ ದೇವರ ಬಗ್ಗೆ ಶ್ರದ್ಧೆ ಇದೆ, ದೇವಾಲಯಕ್ಕೆ ನಾನ್ ವೆಜ್ ತಿಂದು ಹೋಗಿಲ್ಲ. ನಾನು ಹುಟ್ಟಿರೋದೆ ಮಾಂಸ ತಿನ್ನೋ ಜಾತಿಯಲ್ಲಿ. ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಮಾಡುತ್ತಿದ್ದಾರೆ. ವ್ರತ ಪೂಜೆಗಳನ್ನು ಆಚರಿಸುವವನು ನಾನು, ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ ಹಾಗಂತ ತಿಂದು ದಾಸ್ಟ್ಯ ತೋರಿಸಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ ಏನಿವಾಗ, ಯಾರು ಏನ್ ಮಾಡ್ತಾರೆ ಅಂತ ಸಿದ್ದು ರೀತಿ ಹೇಳಲ್ಲ ಎಂದರು.
Ct Ravi visits temple after eating non veg in Bhatkal, sparks controversy.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm