ಬ್ರೇಕಿಂಗ್ ನ್ಯೂಸ್
22-10-20 11:53 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 22: ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.
ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು. ಅವರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಇನ್ನೂ ವಿಶೇಷ ಎಂಬಂತೆ ಚಿರು, ಮೇಘನಾ ನಿಶ್ಚಿತಾರ್ಥದ ದಿನವೇ ಮರಿ ಚಿರು ಆಗಮನ ಸರ್ಜಾ ಕುಟುಂಬಸ್ಥರಲ್ಲಿ ತುಂಬಾ ಸಂತಸವನ್ನುಂಟು ಮಾಡಿದೆ. ಕುಟುಂಬ ಎಲ್ಲ ಸದಸ್ಯರು ಸಂಭ್ರಮಿಸುತ್ತಿದ್ದಾರೆ.
ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೆಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್ವುಡ್ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್ವುಡ್ನಲ್ಲೇ ಸಂತಸ ಮನೆ ಮಾಡಿದೆ.


ಈ ಹಿಂದೆ ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದರು. ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿ, ವಿಡಿಯೋದಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿತ್ತು. ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಸಹ ಸ್ವಾಗತಿಸಿದ್ದರು. ಈ ವೀಡಿಯೋ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.
ಅಕ್ಟೋಬರ್ 17 ಚಿರು ಹುಟ್ಟುಬ್ಬದ ದಿನವಾಗಿದ್ದು, ಇದೇ ದಿನ ಮೇಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಸುದ್ದಿ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಹರಿದಾಡಿತ್ತು. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿತ್ತು. ಕೊನೆಗೆ ಜೈ ಹನುಮಾನ್ ಎಂದಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm