ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm