ಬ್ರೇಕಿಂಗ್ ನ್ಯೂಸ್
01-03-23 02:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1 : ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರು ಕೈಗೊಂಡಿದ್ದ ಮುಷ್ಕರ ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಹಣಕಾಸು ಇಲಾಖೆಯ ಮೂಲಕ ಆದೇಶ ಹೊರಡಿಸಿದ್ದಾರೆ. ತುರ್ತಾಗಿ 17 ಶೇ.ದಷ್ಟು ವೇತನ ಹೆಚ್ಚಿಸಲ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಈ ಕುರಿತು ಹೇಳಿಕೆ ನೀಡಿದ್ದಾರೆ.
ಈಗಾಗಲೇ ಏಳನೇ ವೇತನ ಆಯೋಗವನ್ನು ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆ ನಡೆಸಲಾಗುವುದು. ಈಗ ಮಧ್ಯಂತರ ಪರಿಹಾರ ಘೋಷಿಸಲು ನಿರ್ಧರಿಸಲಾಗಿದೆ ಎಂದರು. ಹಳೆಯ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ನೌಕರರ ಸಂಘ ಮುಂದಿಟ್ಟಿತ್ತು. ಈ ಬಗ್ಗೆ ಅಧ್ಯಯನಕ್ಕಾಗಿ ಹಣಕಾಸು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪಿಂಚಣಿ ಪದ್ಧತಿ ಕುರಿತು ಸಮಿತಿ ವರದಿ ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಜೊತೆಗಿನ ಸಭೆಯ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ವಿವಿಧ ಸಂಘಟನೆಗಳ ಪ್ರಮುಖರ ಜೊತೆಗೆ ಮಾತುಕತೆ ನಡೆಸಿ ಮುಷ್ಕರ ಅಂತ್ಯಗೊಳಿಸುವ ಘೋಷಣೆ ಮಾಡಿದರು. ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನಕ್ಕೆ ಸಮಿತಿ ನೇಮಿಸುವ ತೀರ್ಮಾನವನ್ನು ಒಪ್ಪಿಕೊಂಡು ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ’ ಎಂದರು. ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು
On the day the state government employees embarked on their indefinite strike to demand implementation of the 7th Pay Commission interim report and switching back to the Old Pension Scheme, Chief Minister Basavaraj Bommai on Wednesday announced a 17 per cent interim wage relief for the employees. Speaking to reporters, the CM said, “We have held discussions with officials of the Finance Department. We also held discussions with representatives of the various state government employees’ unions and we have come to an agreement.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm