ಬ್ರೇಕಿಂಗ್ ನ್ಯೂಸ್
02-03-23 06:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸಲು ಶಿಕ್ಷಣ ಇಲಾಖೆ ನಿರಾಕರಿಸಿದೆ. ಈ ಕುರಿತ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಶ್, ಹಿಜಾಬ್ ವಿಷಯವು ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಹಿಜಾಬ್ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ರಾಜ್ಯ ಹೈಕೋರ್ಟ್ ಕಳೆದ ವರ್ಷ ಮಾರ್ಚ್ನಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು 2022ರ ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಹಿಜಾಬ್ ಪರ ಹೋರಾಟಗಾರರಿಗೆ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು ಸದ್ಯ ವಿಚಾರಣೆ ಹಂತದಲ್ಲಿದೆ. ಈ ನಡುವೆ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಆ ಕುರಿತ ತೀರ್ಪು ಇನ್ನೂ ಬಂದಿಲ್ಲ. ಇದೇ ಮಾರ್ಚ್ 10ರಿಂದ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
Karnataka education board denies Writing exams with hijab Muslim Students
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm