ಬ್ರೇಕಿಂಗ್ ನ್ಯೂಸ್
03-03-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ? ಎಂದು ರಾಜ್ಯ ಬಿಜೆಪಿಯನ್ನು ಕರ್ನಾಟಕ ಕಾಂಗ್ರೆಸ್ ತೀವ್ರವಾಗಿ ಅಣಕಿಸಿದೆ.
ಲಂಚ ಪ್ರಕರಣದಲ್ಲಿ ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಶಾಸಕ ಮಾಡಾಳು ಮನೆಗಳಿಗೆ ದಾಳಿ ನಡೆಸಿದ್ದಾರೆ. ಈ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಕಮಿಷನ್ ಲೂಟಿಗೆ ದಾಖಲೆ ಕೇಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ #Election Collection ಬಿರುಸಿನಿಂದ ಸಾಗಿದೆ, ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಆರೋಪಿಸಿದೆ.

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು? ಈ ಹಣ #PayCMಗೆ ತಲುಪಿಸುವುದಕ್ಕಾ ಅಥವಾ #PayPMಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂದು ಪ್ರಶ್ನಿಸಿದೆ.

"ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #ElectionCollection ಹ್ಯಾಶ್ಟ್ಯಾಗ್ ಅಡಿಯಲ್ಲಿ ಪ್ರಶ್ನೆನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #Election Collection ಹ್ಯಾಶ್ಟ್ಯಾಗ್ ಅಡಿಯಲ್ಲಿ ಪ್ರಶ್ನೆ ಮಾಡಿದೆ.
ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!
— Karnataka Congress (@INCKarnataka) March 3, 2023
ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?
ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?
ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ @BJP4Karnataka?#ElectionCollection pic.twitter.com/y3TdEMEWyo
The case of KAS officer Madalu Prashanth, son of BJP MLA Madalu Virupakshappa, who was caught accepting a bribe, has slipped out of the hands of the Congress. In a series of tweets, the Congress said, "Basavaraj Bommai, who used to say give documents to 40% commission, today in the Lokayukta raid, got the record for the commission's karmakanda. Isn't this a testimony to the cosmic corruption? Will you take responsibility for corruption and resign now? What else do you need to say that you are a 40% government, the BJP?"
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm