ಬ್ರೇಕಿಂಗ್ ನ್ಯೂಸ್
03-03-23 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.
ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್ಆರ್ಟಿಸಿ ನಿಗಮ ಸೂಚಿಸಿದೆ. ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್ಆರ್ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.
2nd puc exam students can travel free in ksrtc bus to exam venue by showing halt ticket.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm