ಬ್ರೇಕಿಂಗ್ ನ್ಯೂಸ್
03-03-23 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.
ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್ಆರ್ಟಿಸಿ ನಿಗಮ ಸೂಚಿಸಿದೆ. ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್ಆರ್ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.
2nd puc exam students can travel free in ksrtc bus to exam venue by showing halt ticket.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm