ಬ್ರೇಕಿಂಗ್ ನ್ಯೂಸ್
07-03-23 12:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ಬೇಸಿಗೆ ಇನ್ನೂ ಪ್ರಖರವಾಗುವ ಮುನ್ನವೇ ರಾಜ್ಯ ಹಾಗೂ ರಾಜ್ಯಧಾನಿಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಬಿಸಿಗಾಳಿಯ ಅಲೆಗಳು ಕಂಡುಬಂದಿವೆ.
ಹೀಗಾಗಿ ಆರೋಗ್ಯದ ಬಗ್ಗೆ ಎಲ್ಲರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅಧಿಕ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದೆ. ಅದರಲ್ಲೂ ವೃದ್ಧರು, ಮಕ್ಕಳು, ದುರ್ಬಲ ಆರೋಗ್ಯವುಳ್ಳವರು ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದೆ.
ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಉಲ್ಬಣಿಸಿದೆ. ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ:
ಬಾಯಾರಿಕೆ ಇಲ್ಲದಿದ್ದರೂ ಪದೇ ಪದೆ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು.ದೇಹವು ನಿರ್ಜಲೀಕರಣಗೊಳ್ಳಲು ಬಿಡಬಾರದು.
ರಾಜ್ಯದಲ್ಲಿ ಬಿಸಿಲು ಬೇಗೆ ಹೆಚ್ಚುತ್ತಿದ್ದಂತೆ ಋುತುಮಾನದ ಕಾಯಿಲೆಗಳಾದ ಕಾಲರಾ, ವಿಷಮಶೀತ ಜ್ವರ, ಕಣ್ಣಿನ ತೊಂದರೆ, ವೈರಲ್ ಸೋಂಕು, ನಿರ್ಜಲೀಕರಣ, ಹೊಟ್ಟೆ ನೋವು, ಡೆಂಗೆ, ಚಿಕನ್ ಫಾಕ್ಸ್, ಬಿಸಿನಿಲಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತಿವೆ. ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕಲ್ ಮತ್ತು ಎನರ್ಜಿ ಆಡಿಟಿಂಗ್ ಮಾಡಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯು (ಟಿಎಸಿ) ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ:
ಕರಾವಳಿಯಲ್ಲಿ ಮಳೆ ಬರುವ ಸಾಧ್ಯತೆ ಕೂಡ ಜಾಸ್ತಿಯಾಗಿದೆ. ಈಗಾಗಲೇ ಗುಜರಾತ್ನಲ್ಲಿ ಮಳೆಯ ಸೂಚನೆ ನೀಡಲಾಗಿದೆ. ಭಾನುವಾರದಿಂದ ಮಹಾರಾಷ್ಟ್ರದಲ್ಲೂ ಮಳೆ ನಿರೀಕ್ಷೆಯನ್ನು ಐಎಂಡಿ ನೀಡಿದೆ. ಈ ಎರಡು ರಾಜ್ಯಗಳಲ್ಲಿ ಮಳೆಯಾದರೆ ನಂತರ ನಿಧಾನವಾಗಿ ಇದರ ಪರಿಣಾಮದಿಂದ ಕರಾವಳಿ ಭಾಗದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
Rising temperature in karnataka and coastal regions, viral infections spread, safety alert by weather department.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm